M Laxman
ಮೈಸೂರು : ಆರ್ಮಿ ಕಮಾಂಡೆಂಟ್ ಸೋಫಿಯ ಖುರೇಷಿ ಕುರಿತು ಬಿಜೆಪಿ ನಾಯಕ ವಿಜಯ್ ಶಾ ಅವಹೇಳನಕಾರಿ ಹೇಳಿಕೆ ನೀಡಿರುವ ಮಧ್ಯಪ್ರದೇಶದ ಬಿಜೆಪಿ ಸಚಿವ ಕುನ್ವರ್ ವಿಜಯ ಶಾ ನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ ಜೈಲಿಗಟ್ಟಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಗ್ರಹಿಸಿದರು.
ಮೈಸೂರು ನಗರ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸೇನೆಯಲ್ಲಿ ಜಾತಿ ಧರ್ಮ ಎಂಬುದಿಲ್ಲ. ಆದರೆ, ಮಧ್ಯಪ್ರದೇಶದ ಸಚಿವ, ಬಿಜೆಪಿ ನಾಯಕ ವಿಜಯ್ ಶಾ ಧರ್ಮಧಾರಿತವಾಗಿ ಮಾತನಾಡಿದ್ದಾರೆ ಎಂದು ಕಿಡಿಕಾರಿದರು.
ಸೋಫಿಯ ಖುರೇಶಿ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಖುರೇಶಿ ಟೆರರಿಸ್ಟ್ ತಂಗಿ ಎಂದು ಕರೆದಿದ್ದಾರೆ. ಇದನ್ನು ಇಲ್ಲಿಯವರೆಗೆ ಬಿಜೆಪಿಯ ಯಾವ ನಾಯಕರು ಖಂಡನೆ ಮಾಡಿಲ್ಲ. ಇದು ಬಿಜೆಪಿ ಸರ್ಕಾರದ ಹೇಳಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಸ್ಲಿಂ ಎಂಬ ಕಾರಣಕ್ಕೆ ಬಿಜೆಪಿ ಮತ್ತು ಆರ್ಎಸ್ಎಸ್ ಅಳತೆ ಮಾಡುತ್ತಿದೆ. ಇದೇ ಹೇಳಿಕೆ ವಿರೋಧ ಪಕ್ಷಗಳು ಮಾತನಾಡಿದ್ರೆ ಬೆಂಕಿ ಹೊತ್ತಿಸಿಬಿಡುತ್ತಿದ್ದರು. ಈ ಕೂಡಲೇ ಆತನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿ ಜೈಲಿಗಟ್ಟಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ವಕ್ತಾರ ಕೆ.ಮಹೇಶ್ ಮತ್ತಿತರರು ಹಾಜರಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…