ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮಾರ್ಗದಲ್ಲಿ ಬದಲಾವಣೆ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವ ಎಂದಿನಂತೆ ಸಹಜವಾಗಿ ಸಾಂಪ್ರದಾಯಿಕವಾಗಿ ನಡೆಯಲಿದೆ. 19 ಉಪ ಸಮಿತಿಗಳು ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಸಣ್ಣಪುಟ್ಟ ವ್ಯತ್ಯಾಸಗಳು ಆಗಲಿದೆ. ಜಂಬೂಸವಾರಿ ದಿನ ಸೀಟಿನ ಸಂಖ್ಯೆ ಹೆಚ್ಚಳ ಮಾಡುವ ತೀರ್ಮಾನ ಮಾಡಲಾಗಿದ್ದು, ನಾಲ್ಕು ನೂರು ಮೀಟರ್ ಹೆಚ್ಚಾದರೆ ಹದಿನೈದು ಸಾವಿರ ಸೀಟು ಜಾಸ್ತಿಯಾಗುತ್ತದೆ. ವೈಮಾನಿಕ ಪ್ರದರ್ಶನ ಬಗ್ಗೆ ಸಿಎಂ ಗಮನಕ್ಕೆ ತಂದು ಮಾತನಾಡುತ್ತೇನೆ ಎಂದು ಮಾಹಿತಿ ನೀಡಿದರು.
ಇನ್ನು ಕಂಜನ್ ಹಾಗೂ ಧನಂಜಯ ಆನೆಗಳ ಕಾದಾಟದ ಬಗ್ಗೆ ಮಾತನಾಡಿದ ಅವರು, ಈ ಘಟನೆಯಿಂದ ಗಾಬರಿಪಡುವ ಅಗತ್ಯ ಇಲ್ಲ. ಆನೆಗಳನ್ನು ಮಾವುತ ಕಂಟ್ರೋಲ್ ಮಾಡಿದ್ದಾನೆ. ಅವುಗಳನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಬೇಕಿದೆ. ಅವು ಚೆನ್ನಾಗಿಯೇ ಇದ್ದು ಸಾಕಿದವರನನು ತಿವಿಯಲಿದೆ. ಹಾಗಾಗಿ ಮಾವುತರು ಆನೆಗಳನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ ಎಂದು ಹೇಳಿದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…