ಮೈಸೂರು ನಗರ

ಈ ಬಾರಿ ಜಂಬೂಸವಾರಿ ಮಾರ್ಗದಲ್ಲಿ ಬದಲಾವಣೆ: ಸಚಿವ ಎಚ್.ಸಿ.ಮಹದೇವಪ್ಪ ಮಾಹಿತಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮಾರ್ಗದಲ್ಲಿ ಬದಲಾವಣೆ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವ ಎಂದಿನಂತೆ ಸಹಜವಾಗಿ ಸಾಂಪ್ರದಾಯಿಕವಾಗಿ ನಡೆಯಲಿದೆ. 19 ಉಪ ಸಮಿತಿಗಳು ಬಹಳ ಎಚ್ಚರಿಕೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಸಣ್ಣಪುಟ್ಟ ವ್ಯತ್ಯಾಸಗಳು ಆಗಲಿದೆ. ಜಂಬೂಸವಾರಿ ದಿನ ಸೀಟಿನ ಸಂಖ್ಯೆ ಹೆಚ್ಚಳ ಮಾಡುವ ತೀರ್ಮಾನ ಮಾಡಲಾಗಿದ್ದು, ನಾಲ್ಕು ನೂರು ಮೀಟರ್ ಹೆಚ್ಚಾದರೆ ಹದಿನೈದು ಸಾವಿರ ಸೀಟು ಜಾಸ್ತಿಯಾಗುತ್ತದೆ. ವೈಮಾನಿಕ ಪ್ರದರ್ಶನ ಬಗ್ಗೆ ಸಿಎಂ ಗಮನಕ್ಕೆ ತಂದು ಮಾತನಾಡುತ್ತೇನೆ ಎಂದು ಮಾಹಿತಿ ನೀಡಿದರು.

ಇನ್ನು ಕಂಜನ್‌ ಹಾಗೂ ಧನಂಜಯ ಆನೆಗಳ ಕಾದಾಟದ ಬಗ್ಗೆ ಮಾತನಾಡಿದ ಅವರು, ಈ ಘಟನೆಯಿಂದ ಗಾಬರಿಪಡುವ ಅಗತ್ಯ ಇಲ್ಲ. ಆನೆಗಳನ್ನು ಮಾವುತ ಕಂಟ್ರೋಲ್‌ ಮಾಡಿದ್ದಾನೆ. ಅವುಗಳನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಬೇಕಿದೆ. ಅವು ಚೆನ್ನಾಗಿಯೇ ಇದ್ದು ಸಾಕಿದವರನನು ತಿವಿಯಲಿದೆ. ಹಾಗಾಗಿ ಮಾವುತರು ಆನೆಗಳನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ ಎಂದು ಹೇಳಿದರು.

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

3 mins ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

1 hour ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

1 hour ago

ರಾಜ್ಯದಲ್ಲಿ ಪೂರ್ವ ಮುಂಗಾರು ಆರ್ಭಟ: ಮುಂದಿನ 7 ದಿನ ಮುಂದುವರಿಯಲಿದೆ ಮಳೆ

ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ…

2 hours ago

ಬೆಂಗಳೂರಿಗಿಂತ ಮಡಿಕೇರಿಯ ವಾಯುಗುಣಮಟ್ಟವೇ ಉತ್ತಮ!

ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…

2 hours ago

ತಮಿಳುನಾಡು ಸಿಎಂ ವಿಜಯ್‌ ಸಾಧನೆ ಹೊಗಳಿದ ರಜಿನಿಕಾಂತ್‌

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ‌ ಚನ್ನೈನ ತಮ್ಮ ನಿವಾಸದಲ್ಲಿ…

3 hours ago