ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ ಕೊನೆಯ ಸಾರ್ವಜನಿಕ ಕಾರ್ಯಕ್ರಮವೂ ಸಾಂಸ್ಕೃತಿಕ ನಗರಿಯಲ್ಲೇ ನಡೆದಿತ್ತು. ಇದೀಗ ಅವರ ಉಸಿರು ಚೆಲ್ಲಿದ್ದು ಕೂಡ ಮೈಸೂರಿನಲ್ಲೇ ಎಂಬುದು ಗಮನಾರ್ಹ.
ಮೈಸೂರಿಗೂ ಗಾನ ಕೋಗಿಲೆ ಎಸ್.ಜಾನಕಿ ಅವರಿಗೆ ಅವಿನಾಭಾವ ನಂಟು. 1952ರಲ್ಲಿ ಮೈಸೂರಿನಲ್ಲಿ ಸಂಗೀತ ನಿರ್ದೇಶಕ ಜಿ.ಕೆ.ವೆಂಕಟೇಶ್ ಅವರು ಆಯೋಜನೆ ಮಾಡಿದ್ದ ಸಂಗೀತ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಜಾನಕಿ ಅವರು ದನಿಗೂಡಿಸಿದ್ದರು. ಅಲ್ಲಿಂದ ಅವರಿಗೆ ಈ ಊರಿನ ಜೊತೆಗೆ ನಂಟು ಗಾಢವಾಗಿ ಬೆಳೆಯಿತು. ವಿಶೇಷವೆಂದರೆ ಅವರ ಕೊನೆಯ ಸಾರ್ವಜನಿಕ ಕಾರ್ಯಕ್ರಮ ನಡೆದಿದ್ದು ಕೂಡ ಮೈಸೂರಿನಲ್ಲೇ.
2017ರ ಅಕ್ಟೋಬರ್ನಲ್ಲಿ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಕೊನೆಯ ಬಾರಿಗೆ ಸಾರ್ವಜನಿಕವಾಗಿ ಹಾಡಿದ್ದರು. ಮೈಸೂರಿನಲ್ಲಿ ಎಸ್.ಜಾನಕಿ ಹೆಚ್ಚು ಕಾರ್ಯಕ್ರಮಗಳನ್ನು ನೀಡದಿದ್ದರೂ, ಈ ಪಾರಂಪರಿಕಿ ನಗರಕ್ಕೆ ಹಲವು ಬಾರಿ ಭೇಟಿ ನೀಡಿದ್ದರು. ಅಷ್ಟೇ ಅಲ್ಲದೇ, ತಮ್ಮ ಮಕ್ಕಳೊಂದಿಗೆ ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟವನ್ನು ಮೆಟ್ಟಿಲು ಏರಿ ತಾಯಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದಿದ್ದರು.
48 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿ, 20ಕ್ಕೂ ಅಧಿಕ ಭಾಷೆಗಳ ಹಾಡುಗಳಿಗೆ ಜೀವ ತುಂಬಿದ ಗಾಯಕಿ, ಉಸಿರು ಚೆಲ್ಲಿದ್ದು ಮೈಸೂರಿನಲ್ಲೇ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಜಾನಕಿ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿಯಲ್ಲಿ ಶನಿವಾರ ಕೊನೆಯುಸಿರೆಳೆದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…