ಮೈಸೂರು ನಗರ

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ ಕೊನೆಯ ಸಾರ್ವಜನಿಕ ಕಾರ್ಯಕ್ರಮವೂ ಸಾಂಸ್ಕೃತಿಕ ನಗರಿಯಲ್ಲೇ ನಡೆದಿತ್ತು. ಇದೀಗ ಅವರ ಉಸಿರು ಚೆಲ್ಲಿದ್ದು ಕೂಡ ಮೈಸೂರಿನಲ್ಲೇ ಎಂಬುದು ಗಮನಾರ್ಹ.

ಮೈಸೂರಿಗೂ ಗಾನ ಕೋಗಿಲೆ ಎಸ್.ಜಾನಕಿ ಅವರಿಗೆ ಅವಿನಾಭಾವ ನಂಟು. 1952ರಲ್ಲಿ ಮೈಸೂರಿನಲ್ಲಿ ಸಂಗೀತ ನಿರ್ದೇಶಕ ಜಿ.ಕೆ.ವೆಂಕಟೇಶ್‌ ಅವರು ಆಯೋಜನೆ ಮಾಡಿದ್ದ ಸಂಗೀತ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಜಾನಕಿ ಅವರು ದನಿಗೂಡಿಸಿದ್ದರು. ಅಲ್ಲಿಂದ ಅವರಿಗೆ ಈ ಊರಿನ ಜೊತೆಗೆ ನಂಟು ಗಾಢವಾಗಿ ಬೆಳೆಯಿತು. ವಿಶೇಷವೆಂದರೆ ಅವರ ಕೊನೆಯ ಸಾರ್ವಜನಿಕ ಕಾರ್ಯಕ್ರಮ ನಡೆದಿದ್ದು ಕೂಡ ಮೈಸೂರಿನಲ್ಲೇ.

2017ರ ಅಕ್ಟೋಬರ್‌ನಲ್ಲಿ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಕೊನೆಯ ಬಾರಿಗೆ ಸಾರ್ವಜನಿಕವಾಗಿ ಹಾಡಿದ್ದರು. ಮೈಸೂರಿನಲ್ಲಿ ಎಸ್.ಜಾನಕಿ ಹೆಚ್ಚು ಕಾರ್ಯಕ್ರಮಗಳನ್ನು ನೀಡದಿದ್ದರೂ, ಈ ಪಾರಂಪರಿಕಿ ನಗರಕ್ಕೆ ಹಲವು ಬಾರಿ ಭೇಟಿ ನೀಡಿದ್ದರು. ಅಷ್ಟೇ ಅಲ್ಲದೇ, ತಮ್ಮ ಮಕ್ಕಳೊಂದಿಗೆ ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟವನ್ನು ಮೆಟ್ಟಿಲು ಏರಿ ತಾಯಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದಿದ್ದರು.

48 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿ, 20ಕ್ಕೂ ಅಧಿಕ ಭಾಷೆಗಳ ಹಾಡುಗಳಿಗೆ ಜೀವ ತುಂಬಿದ ಗಾಯಕಿ, ಉಸಿರು ಚೆಲ್ಲಿದ್ದು ಮೈಸೂರಿನಲ್ಲೇ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಜಾನಕಿ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿಯಲ್ಲಿ ಶನಿವಾರ ಕೊನೆಯುಸಿರೆಳೆದರು.

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

2 mins ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

1 hour ago

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

2 hours ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

3 hours ago

ಹಾಡುಪಾಡು | ಯರಕನಗದ್ದೆ ಪೋಡಿನಲ್ಲಿ ವೋಟು ಕಾರ್ಡಿನ ಪರದಾಟ

ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…

3 hours ago

ಹಾಡುಪಾಡು | ಜೈಫುಲ್ ಮೇಷ್ಟ್ರ ಕಷ್ಟಕ್ಕೆ ಮಿಡಿಯುತ್ತಿರುವ ಶಿಷ್ಯ ಹೃದಯಗಳು

ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…

5 hours ago