ಮೈಸೂರು: ರಾಜ್ಯ ಸರ್ಕಾರದಿಂದ ನಿರಂತರ ಬೆಲೆ ಏರಿಕೆ ಹಾಗೂ ಮುಸ್ಲಿಂ ಓಲೈಕೆ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಈ ಯಾತ್ರೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಚಾಲನೆ ನೀಡಿದರು.
ಮೊದಲಿಗೆ ನಾಡ ದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಬಿಜೆಪಿ ನಾಯಕರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಆ ಬಳಿಕ ಮೈಸೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಿದರು.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎಂಎಲ್ಸಿ ಸಿ.ಟಿ.ರವಿ, ಮಾಜಿ ಸಚಿವರುಗಳು ಸೇರಿದಂತೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ಯಾತ್ರೆಯುದ್ದಕ್ಕೂ ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ ಬಿಜೆಪಿ ನಾಯಕರು, ಈ ಸರ್ಕಾರ ರೈತ ವಿರೋಧಿ ಹಾಗೂ ಜನವಿರೋಧಿ ಸರ್ಕಾರ ಎಂದು ಕಿಡಿಕಾರಿದರು.
ಇನ್ನು ಈ ಜನಾಕ್ರೋಶ ಯಾತ್ರೆ ಮೇ.3ರವರೆಗೂ ನಡೆಯಲಿದ್ದು, ರಾಜ್ಯ ಸರ್ಕಾರಕ್ಕೆ ಬಿಜೆಪಿ ನಾಯಕರು ಚುರುಕು ಮುಟ್ಟಿಸುವ ಕೆಲಸ ಮಾಡಲಿದ್ದಾರೆ.
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…