ಮೈಸೂರು: ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್ಸಿ ಮಹದೇವಪ್ಪ ಅವರ ನೇತೃತ್ವದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮ ಒಟ್ಟು 112 ಸ್ವೀಕಾರವಾಗಿವೆ.
ಅದರಲ್ಲಿ ಕುಡಿಯುವ ನೀರಿನ ಕೊರತೆ, ಕಟ್ಟಡ ಮತ್ತು ವಸತಿ ಸಮಸ್ಯೆ, ಜಮೀನಿನ ಸಮಸ್ಯೆ ಸೇರಿದಂತೆ ಇನ್ನೂ ಮುಂತಾದ ಹಲವು ಸಮಸ್ಯೆಗಳ ಹೊತ್ತು ಸಾರ್ವಜನಿಕರು ಸಚಿವರನ್ನು ಭೇಟಿಯಾದರು.
ಬಳಿಕ ಮಾತನಾಡಿದ ಸಚಿವರು ಅಧಿಕಾರಿಗಳ ಜೊತೆ ಸೇರಿ ಚರ್ಚಿಸಿ ಶೀಘ್ರವಾಗಿ ಪರಿಹರಿಸಲಾಗುವುದು. ಮುಂಬರುವ ದಿನಗಳಲ್ಲಿ ಮತ್ತೊಮ್ಮೆ ಸಾರ್ವಜನಿಕರ ಸಮಸ್ಯೆಗಳಿಗೆ 2-3 ಗಂಟೆಗಳ ಕಾಲ ಸಮಯ ನಿಗದಿ ಮಾಡಿ ಅವರಿಗೆ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೆ ಸಂದರ್ಭದಲ್ಲಿ ತುಳಸಿ ಶಕ್ತಿ ನಗರದ ಮಹಿಳಾ ಸಮಾಜದಲ್ಲಿ ಕಾರ್ಯನಿರ್ವಹಿಸುವ ಬಡ ಮಹಿಳೆಯರಿಗೋಸ್ಕರ, ಅವರ ಆರ್ಥಿಕ ಮತ್ತು ಸಾಮಾಜಿಕ ಹಿತ ದೃಷ್ಠಿಯಿಂದ ಸರ್ಕಾರದ ವತಿಯಿಂದ ರೂ.5 ಲಕ್ಷ ಪರಿಹಾರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
ವಿಕಲಚೇತನರೊಬ್ಬರ ಕುಟುಂಬದವರೆಲ್ಲರೂ ಅಂಧರಾಗಿದ್ದು ಅವರ ನಿವೇಶನವು ನಾಲ್ಕನೇ ಮಹಡಿಯಲ್ಲಿದ್ದು ಅದನ್ನು ಬದಲಾಯಿಸುವ ಕುರಿತು ಸಲ್ಲಿಸಿದ ಮನವಿಗೆ ಶೀಘ್ರವಾಗಿ ಬದಲಾವಣೆಯನ್ನು ಮಾಡಿಕೊಳ್ಳಲಾಗುವುದು ಎಂದು ಹೇಳಿದರು. ಮಹಿಳೆಯೊಬ್ಬಳಿಗೆ ಕೈ ಮತ್ತು ಕಾಲು ಇಲ್ಲದ ಕಾರಣ ಆಕೆಯ ಮುಂದಿನ ಜೀವನವನ್ನು ಸಾಗಿಸಲು ಅಂಗಡಿಯ ವ್ಯವಸ್ಥೆಯನ್ನು ಮಾಡಿಕೊಡಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…