ಮೈಸೂರು: ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್ಸಿ ಮಹದೇವಪ್ಪ ಅವರ ನೇತೃತ್ವದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮ ಒಟ್ಟು 112 ಸ್ವೀಕಾರವಾಗಿವೆ.
ಅದರಲ್ಲಿ ಕುಡಿಯುವ ನೀರಿನ ಕೊರತೆ, ಕಟ್ಟಡ ಮತ್ತು ವಸತಿ ಸಮಸ್ಯೆ, ಜಮೀನಿನ ಸಮಸ್ಯೆ ಸೇರಿದಂತೆ ಇನ್ನೂ ಮುಂತಾದ ಹಲವು ಸಮಸ್ಯೆಗಳ ಹೊತ್ತು ಸಾರ್ವಜನಿಕರು ಸಚಿವರನ್ನು ಭೇಟಿಯಾದರು.
ಬಳಿಕ ಮಾತನಾಡಿದ ಸಚಿವರು ಅಧಿಕಾರಿಗಳ ಜೊತೆ ಸೇರಿ ಚರ್ಚಿಸಿ ಶೀಘ್ರವಾಗಿ ಪರಿಹರಿಸಲಾಗುವುದು. ಮುಂಬರುವ ದಿನಗಳಲ್ಲಿ ಮತ್ತೊಮ್ಮೆ ಸಾರ್ವಜನಿಕರ ಸಮಸ್ಯೆಗಳಿಗೆ 2-3 ಗಂಟೆಗಳ ಕಾಲ ಸಮಯ ನಿಗದಿ ಮಾಡಿ ಅವರಿಗೆ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೆ ಸಂದರ್ಭದಲ್ಲಿ ತುಳಸಿ ಶಕ್ತಿ ನಗರದ ಮಹಿಳಾ ಸಮಾಜದಲ್ಲಿ ಕಾರ್ಯನಿರ್ವಹಿಸುವ ಬಡ ಮಹಿಳೆಯರಿಗೋಸ್ಕರ, ಅವರ ಆರ್ಥಿಕ ಮತ್ತು ಸಾಮಾಜಿಕ ಹಿತ ದೃಷ್ಠಿಯಿಂದ ಸರ್ಕಾರದ ವತಿಯಿಂದ ರೂ.5 ಲಕ್ಷ ಪರಿಹಾರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
ವಿಕಲಚೇತನರೊಬ್ಬರ ಕುಟುಂಬದವರೆಲ್ಲರೂ ಅಂಧರಾಗಿದ್ದು ಅವರ ನಿವೇಶನವು ನಾಲ್ಕನೇ ಮಹಡಿಯಲ್ಲಿದ್ದು ಅದನ್ನು ಬದಲಾಯಿಸುವ ಕುರಿತು ಸಲ್ಲಿಸಿದ ಮನವಿಗೆ ಶೀಘ್ರವಾಗಿ ಬದಲಾವಣೆಯನ್ನು ಮಾಡಿಕೊಳ್ಳಲಾಗುವುದು ಎಂದು ಹೇಳಿದರು. ಮಹಿಳೆಯೊಬ್ಬಳಿಗೆ ಕೈ ಮತ್ತು ಕಾಲು ಇಲ್ಲದ ಕಾರಣ ಆಕೆಯ ಮುಂದಿನ ಜೀವನವನ್ನು ಸಾಗಿಸಲು ಅಂಗಡಿಯ ವ್ಯವಸ್ಥೆಯನ್ನು ಮಾಡಿಕೊಡಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…