ಮೈಸೂರು ನಗರ

ಜನೋಪಕಾರಿಯಾಗಿವೆ ಜನೌಷಧಿ ಕೇಂದ್ರಗಳು: ಯದುವೀರ್‌ ಒಡೆಯರ್‌

ಮೈಸೂರು: ನಾಡಿನ ಎಲ್ಲ ನಾಗರಿಕರು ಆರೋಗ್ಯದಿಂದಿರಬೇಕು ಮತ್ತು ಔಷಧಿಗಳ ಖರೀದಿ ಜನರಿಗೆ ಹೊರೆಯಾಗಬಾರದು ಎಂಬ ದಿವ್ಯ ಆಲೋಚನೆಯೊಂದಿಗೆ ಆರಂಭಿಸಲಾಗಿರುವ ಜನೌಷಧಿ ಕೇಂದ್ರಗಳು ಜನೋಪಕಾರಿಯಾಗಿವೆ ಎಂದು ಸಂಸದ ಯದುವೀರ್‌ ಚಾಮರಾಜ ಕೃಷ್ಣದತ್ತ ಒಡೆಯರ್‌ ತಿಳಿಸಿದ್ದಾರೆ.

ನಗರದ ಕೆ.ಆರ್‌. ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರದಲ್ಲಿ ಜನೌಷಧಿ ಕೇಂದ್ರಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಸಂಸದ ಯದುವೀರ್‌ ಒಡೆಯರ್‌ ಭಾಷಣ ಮಾಡಿದರು.

ಬಡ, ಮಧ್ಯಮ ವರ್ಗ ಹಾಗೂ ಸಾಮಾನ್ಯ ಜನರಿಗೆ ಜನೌಷಧಿ ಕೇಂದ್ರಗಳಿಂದ ಭಾರಿ ಪ್ರಯೋಜನಗಳಾಗಿವೆ. ಜನೌಷಧಿಗಳ ಬಳಕೆ ಮತ್ತು ಉಪಯೋಗಗಳ ಬಗ್ಗೆ ಈಗಾಗಲೇ ಸಾಕಷ್ಟು ಅಭಿಯಾನ ನಡೆಸಲಾಗಿದೆ ಎಂದು ತಿಳಿಸಿದರು.

ಜನೌಷಧಿ ಕೇಂದ್ರಗಳು ಆರಂಭವಾದ ನಂತರ ಮಧ್ಯಮ ವರ್ಗದವರ ಮೇಲೆ ಹೆಚ್ಚಿನ ಹೊರೆ ಆಗುತ್ತಿಲ್ಲ. ಈ ಮೊದಲು ಔಷಧಿಗಳಿಗೆ ಹೆಚ್ಚು ವ್ಯಯಿಸುತ್ತಿದ್ದ ಜನರು ಈಗ ಜನೌಷಧಿ ಕೇಂದ್ರಗಳಲ್ಲಿ ಔಷಧಿ ಖರೀದಿ ಮಾಡುವ ಮೂಲಕ ಸಾಕಷ್ಟು ಹಣ ಉಳಿಸುತ್ತಿದ್ದಾರೆ ಎಂದು ಹೇಳಿದರು.

ಕಡಿಮೆ ಬೆಲೆಯಿಂದಾಗಿ ಬಡ ರೋಗಿಗಳಿಗೆ ಜನೌಷಧಿ ಕೇಂದ್ರಗಳು ಅನುಕೂಲವಾಗಿದೆ. ಜನೌಷಧಿ ಮಳಿಗೆಗಳಲ್ಲಿ ಬಿಪಿ, ಷುಗರ್‌, ಅಸಿಡಿಟಿ ಹಾಗೂ ಸಾಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಔಷಧ ಲಭ್ಯವಾಗುತ್ತಿದೆ. ಇತ್ತೀಚೆಗೆ ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಮಾತ್ರೆ ಸಿಗುತ್ತಿದೆ ಎಂದು ಸಂಸದರು ತಿಳಿಸಿದರು.

ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಸದುದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನೌಷಧಿ ಕೇಂದ್ರಗಳಿಗೆ ನೂತನ ಸ್ಪರ್ಶ ನೀಡಿದರು. ಈಗ ಲಕ್ಷಾಂತರ ಜನೌಷಧಿ ಕೇಂದ್ರಗಳು ಸಾರ್ವಜನಿಕ ಸೇವೆಗೆ ಲಭ್ಯವಾಗಿವೆ. ನಮ್ಮ ಕೇಂದ್ರ ಬಿಜೆಪಿ ಸರ್ಕಾರದ ಜನಪರ ಕಾಳಜಿಗಳಿಗೆ ಇದು ಸಾಕ್ಷಿಯಾಗಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದರು.

ಮಡಿಕೇರಿಯಲ್ಲಿಯೂ ಜನೌಷಧಿ ಕೇಂದ್ರ ದಿನಾಚರಣೆ:

ಶುಕ್ರವಾರ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ಸಂದ ಯದುವೀರ್‌ ಒಡೆಯರ್‌, ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರದಲ್ಲಿ ಜನೌಷಧಿ ಕೇಂದ್ರ ದಿನಾಚರಣೆಯಲ್ಲಿ ಪಾಲ್ಗೊಂಡರು.

ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಜನೌಷಧಿ ಕೇಂದ್ರಕ್ಕೆ ಹೆಚ್ಚು ಜನರು ಭೇಟಿ ನೀಡುತ್ತಿದ್ದು, ಇಲ್ಲಿನ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಜನಪರ ಹಾಗೂ ಜನೋಪಯೋಗಿ ಯೋಜನೆಗಳನ್ನು ಹಮ್ಮಿಕೊಳ್ಳುವಲ್ಲಿ ನಮ್ಮ ಕೇಂದ್ರ ಬಿಜೆಪಿ ಸರ್ಕಾರ ಸದಾ ಮುಂದಾಗಿದೆ. ಮುಂದಿನ ದಿನಗಳಲ್ಲಿ ಜನೌಷಧಿ ಕೇಂದ್ರಗಳ ಸಂಖ್ಯೆ ಹೆಚ್ಚಾಗಲಿದೆ. ನಮ್ಮ ಕ್ಷೇತ್ರದಲ್ಲಿಯೂ ಹೆಚ್ಚು ಜನೌಷಧಿ ಕೇಂದ್ರ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

20 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

20 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

20 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago