ಮೈಸೂರು ನಗರ

ಜನೋಪಕಾರಿಯಾಗಿವೆ ಜನೌಷಧಿ ಕೇಂದ್ರಗಳು: ಯದುವೀರ್‌ ಒಡೆಯರ್‌

ಮೈಸೂರು: ನಾಡಿನ ಎಲ್ಲ ನಾಗರಿಕರು ಆರೋಗ್ಯದಿಂದಿರಬೇಕು ಮತ್ತು ಔಷಧಿಗಳ ಖರೀದಿ ಜನರಿಗೆ ಹೊರೆಯಾಗಬಾರದು ಎಂಬ ದಿವ್ಯ ಆಲೋಚನೆಯೊಂದಿಗೆ ಆರಂಭಿಸಲಾಗಿರುವ ಜನೌಷಧಿ ಕೇಂದ್ರಗಳು ಜನೋಪಕಾರಿಯಾಗಿವೆ ಎಂದು ಸಂಸದ ಯದುವೀರ್‌ ಚಾಮರಾಜ ಕೃಷ್ಣದತ್ತ ಒಡೆಯರ್‌ ತಿಳಿಸಿದ್ದಾರೆ.

ನಗರದ ಕೆ.ಆರ್‌. ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರದಲ್ಲಿ ಜನೌಷಧಿ ಕೇಂದ್ರಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಸಂಸದ ಯದುವೀರ್‌ ಒಡೆಯರ್‌ ಭಾಷಣ ಮಾಡಿದರು.

ಬಡ, ಮಧ್ಯಮ ವರ್ಗ ಹಾಗೂ ಸಾಮಾನ್ಯ ಜನರಿಗೆ ಜನೌಷಧಿ ಕೇಂದ್ರಗಳಿಂದ ಭಾರಿ ಪ್ರಯೋಜನಗಳಾಗಿವೆ. ಜನೌಷಧಿಗಳ ಬಳಕೆ ಮತ್ತು ಉಪಯೋಗಗಳ ಬಗ್ಗೆ ಈಗಾಗಲೇ ಸಾಕಷ್ಟು ಅಭಿಯಾನ ನಡೆಸಲಾಗಿದೆ ಎಂದು ತಿಳಿಸಿದರು.

ಜನೌಷಧಿ ಕೇಂದ್ರಗಳು ಆರಂಭವಾದ ನಂತರ ಮಧ್ಯಮ ವರ್ಗದವರ ಮೇಲೆ ಹೆಚ್ಚಿನ ಹೊರೆ ಆಗುತ್ತಿಲ್ಲ. ಈ ಮೊದಲು ಔಷಧಿಗಳಿಗೆ ಹೆಚ್ಚು ವ್ಯಯಿಸುತ್ತಿದ್ದ ಜನರು ಈಗ ಜನೌಷಧಿ ಕೇಂದ್ರಗಳಲ್ಲಿ ಔಷಧಿ ಖರೀದಿ ಮಾಡುವ ಮೂಲಕ ಸಾಕಷ್ಟು ಹಣ ಉಳಿಸುತ್ತಿದ್ದಾರೆ ಎಂದು ಹೇಳಿದರು.

ಕಡಿಮೆ ಬೆಲೆಯಿಂದಾಗಿ ಬಡ ರೋಗಿಗಳಿಗೆ ಜನೌಷಧಿ ಕೇಂದ್ರಗಳು ಅನುಕೂಲವಾಗಿದೆ. ಜನೌಷಧಿ ಮಳಿಗೆಗಳಲ್ಲಿ ಬಿಪಿ, ಷುಗರ್‌, ಅಸಿಡಿಟಿ ಹಾಗೂ ಸಾಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಔಷಧ ಲಭ್ಯವಾಗುತ್ತಿದೆ. ಇತ್ತೀಚೆಗೆ ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಮಾತ್ರೆ ಸಿಗುತ್ತಿದೆ ಎಂದು ಸಂಸದರು ತಿಳಿಸಿದರು.

ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಸದುದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನೌಷಧಿ ಕೇಂದ್ರಗಳಿಗೆ ನೂತನ ಸ್ಪರ್ಶ ನೀಡಿದರು. ಈಗ ಲಕ್ಷಾಂತರ ಜನೌಷಧಿ ಕೇಂದ್ರಗಳು ಸಾರ್ವಜನಿಕ ಸೇವೆಗೆ ಲಭ್ಯವಾಗಿವೆ. ನಮ್ಮ ಕೇಂದ್ರ ಬಿಜೆಪಿ ಸರ್ಕಾರದ ಜನಪರ ಕಾಳಜಿಗಳಿಗೆ ಇದು ಸಾಕ್ಷಿಯಾಗಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದರು.

ಮಡಿಕೇರಿಯಲ್ಲಿಯೂ ಜನೌಷಧಿ ಕೇಂದ್ರ ದಿನಾಚರಣೆ:

ಶುಕ್ರವಾರ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ಸಂದ ಯದುವೀರ್‌ ಒಡೆಯರ್‌, ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರದಲ್ಲಿ ಜನೌಷಧಿ ಕೇಂದ್ರ ದಿನಾಚರಣೆಯಲ್ಲಿ ಪಾಲ್ಗೊಂಡರು.

ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಜನೌಷಧಿ ಕೇಂದ್ರಕ್ಕೆ ಹೆಚ್ಚು ಜನರು ಭೇಟಿ ನೀಡುತ್ತಿದ್ದು, ಇಲ್ಲಿನ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಜನಪರ ಹಾಗೂ ಜನೋಪಯೋಗಿ ಯೋಜನೆಗಳನ್ನು ಹಮ್ಮಿಕೊಳ್ಳುವಲ್ಲಿ ನಮ್ಮ ಕೇಂದ್ರ ಬಿಜೆಪಿ ಸರ್ಕಾರ ಸದಾ ಮುಂದಾಗಿದೆ. ಮುಂದಿನ ದಿನಗಳಲ್ಲಿ ಜನೌಷಧಿ ಕೇಂದ್ರಗಳ ಸಂಖ್ಯೆ ಹೆಚ್ಚಾಗಲಿದೆ. ನಮ್ಮ ಕ್ಷೇತ್ರದಲ್ಲಿಯೂ ಹೆಚ್ಚು ಜನೌಷಧಿ ಕೇಂದ್ರ ಸ್ಥಾಪನೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

1 hour ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

3 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

4 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

5 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

6 hours ago