ಮೈಸೂರು ನಗರ

ಜಯಪ್ರಕಾಶ್ ಹೆಗಡೆ ಆಯೋಗದ ಜಾತಿಗಣತಿ ವರದಿ ವೈಜ್ಞಾನಿಕ : ಕೆ.ಎಸ್.ಶಿವರಾಮು ಪ್ರತಿಪಾದನೆ

ಮೈಸೂರು: ಎಲ್ಲಾ ಸಮುದಾಯಗಳಿಗೂ ಸಮಾನವಾದ ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ 2015ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯದ 2 ಲಕ್ಷ ಜನರಿಂದ ಮಾಹಿತಿ ಪಡೆದು 180 ಕೋಟಿ ರೂ. ಹಣ ವೆಚ್ಚ ಮಾಡಿ ಜಾತಿಗಣತಿಯನ್ನು ಮಾಡಿಸಿದ್ದಾರೆ. ಹಾಗಾಗಿ ಜಯಪ್ರಕಾಶ್ ಹೆಗಡೆ ಆಯೋಗ ನೀಡಿರುವ ಜಾತಿಗಣತಿ ವರದಿ ವೈಜ್ಞಾನಿಕವಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಸರ್ಕಾರ ಈ ವರದಿ ತಯಾರಿಸಿದೆ. ಈ ಜಾತಿ ಗಣತಿ ವರದಿ ಶೇ.95ರಷ್ಟು ಸತ್ಯಾಂಶದಿಂದ ಕೂಡಿದೆ. ಆದರೆ, ಇದನ್ನು ಕೇವಲ ರಾಜಕೀಯ ಕಾರಣಗಳಿಗಾಗಿ ಮಾತ್ರ ಕೆಲವು ಮೇಲ್ವರ್ಗದವರು ವಿರೋಧಿಸುತ್ತಿದ್ದಾರೆಯೇ ಹೊರತು ಬೇರಾವ ಕಾರಣವೂ ಇಲ್ಲ ಎಂದು ಕಿಡಿಕಾರಿದರು.

ಒಂದು ವೇಳೆ ಈ ಜಾತಿ ಗಣತಿಯ ವರದಿಯಲ್ಲಿ ಏನಾದರೂ ಲೋಪದೋಷಗಳಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ. ಅದನ್ನು ಬಿಟ್ಟು ಅನಾವಶ್ಯಕವಾಗಿ ಜಾತಿ ಜಾತಿ ಎಂದು ಬೇರೆ ಧರ್ಮದವರ, ಬೇರೆ ಜಾತಿಯವರ ಬಗ್ಗೆ ಕೀಳಾಗಿ ಕಾಣಬೇಡಿ. ಒಕ್ಕಲಿಗ ಸಮುದಾಯದಲ್ಲೂ ಬಡವರಿದ್ದಾರೆ. ಲಿಂಗಾಯತ, ಬ್ರಾಹ್ಮಣ ಸಮುದಾಯದಲ್ಲೂ ಬಡವರಿದ್ದಾರೆ. ಅವರಿಗೆ ನ್ಯಾಯ ಸಿಗುವುದು ಬೇಡವೇ? ಎಂದು ಪ್ರಶ್ನಿಸಿದರು.

ಜಾತಿ ಗಣತಿಗೆ ನಮ್ಮ ಮನೆಗೆ ಯಾರೂ ಬಂದಿಲ್ಲ ಎಂದು ಈಗ ಹೇಳುವ ನಿಖಿಲ್ ಕುಮಾರಸ್ವಾಮಿ ಅವರು ಈ ವಿಷಯವನ್ನು ಆಗಲೇ ಯಾಕೆ ಸಂಬಂಧಪಟ್ಟವರನ್ನು ಪ್ರಶ್ನೆ ಮಾಡಲಿಲ್ಲ. ಈಗ ನಮ್ಮ ಮನೆಗೆ ಬಂದಿಲ್ಲ ಎಂದು ವಿರೋಧ ಮಾಡುವಿರಾದರೆ ಖಂಡಿತಾ ನೀವು ಶಾಸಕರಾಗಲು ಅನರ್ಹರರು ಎಂದು ಕಿಡಿಕಾರಿದರು.

ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಯೋಗೇಶ್ ಉಪ್ಪಾರ್ ಮಾತನಾಡಿದರು. ಜಿಲ್ಲಾ ಕುಂಬಾರರ ಸಂಘದ ಅಧ್ಯಕ್ಷ ಎನ್.ಎಸ್.ಪ್ರಕಾಶ್, ಜಿಲ್ಲಾ ಮಡಿವಾಳ ಸಂಘದ ಉಪಾಧ್ಯಕ್ಷ ಕೇಶವ್ ವಿಜಿ, ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಯೋಗೇಶ್ ಉಪ್ಪಾರ್, ಕರ್ನಾಟಕ ದಲಿತ ಚಳವಳಿ ನವ ನಿರ್ಮಾಣ ವೇದಿಕೆ ಹೊರಳ ವಾಡಿ ನಂಜುಂಡಸ್ವಾಮಿ, ಬಂಗವಾದಿ ನಾರಾಯಣಪ್ಪ, ಹಿಂದುಳಿದ ವರ್ಗಗಳ ಮುಖಂಡರರಾದ ಲೋಕೇಶ್ ಕುಮಾರ್ ಮಾದಾಪುರ, ಪರಿಶಿಷ್ಟ ಪಂಗಡಗಳ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಶಿಂಷಾ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

5 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

5 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

5 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

6 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

6 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

7 hours ago