jayaprakash hegde mysuru siddaramaiah
ಮೈಸೂರು: ಎಲ್ಲಾ ಸಮುದಾಯಗಳಿಗೂ ಸಮಾನವಾದ ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ 2015ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯದ 2 ಲಕ್ಷ ಜನರಿಂದ ಮಾಹಿತಿ ಪಡೆದು 180 ಕೋಟಿ ರೂ. ಹಣ ವೆಚ್ಚ ಮಾಡಿ ಜಾತಿಗಣತಿಯನ್ನು ಮಾಡಿಸಿದ್ದಾರೆ. ಹಾಗಾಗಿ ಜಯಪ್ರಕಾಶ್ ಹೆಗಡೆ ಆಯೋಗ ನೀಡಿರುವ ಜಾತಿಗಣತಿ ವರದಿ ವೈಜ್ಞಾನಿಕವಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಸರ್ಕಾರ ಈ ವರದಿ ತಯಾರಿಸಿದೆ. ಈ ಜಾತಿ ಗಣತಿ ವರದಿ ಶೇ.95ರಷ್ಟು ಸತ್ಯಾಂಶದಿಂದ ಕೂಡಿದೆ. ಆದರೆ, ಇದನ್ನು ಕೇವಲ ರಾಜಕೀಯ ಕಾರಣಗಳಿಗಾಗಿ ಮಾತ್ರ ಕೆಲವು ಮೇಲ್ವರ್ಗದವರು ವಿರೋಧಿಸುತ್ತಿದ್ದಾರೆಯೇ ಹೊರತು ಬೇರಾವ ಕಾರಣವೂ ಇಲ್ಲ ಎಂದು ಕಿಡಿಕಾರಿದರು.
ಒಂದು ವೇಳೆ ಈ ಜಾತಿ ಗಣತಿಯ ವರದಿಯಲ್ಲಿ ಏನಾದರೂ ಲೋಪದೋಷಗಳಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ. ಅದನ್ನು ಬಿಟ್ಟು ಅನಾವಶ್ಯಕವಾಗಿ ಜಾತಿ ಜಾತಿ ಎಂದು ಬೇರೆ ಧರ್ಮದವರ, ಬೇರೆ ಜಾತಿಯವರ ಬಗ್ಗೆ ಕೀಳಾಗಿ ಕಾಣಬೇಡಿ. ಒಕ್ಕಲಿಗ ಸಮುದಾಯದಲ್ಲೂ ಬಡವರಿದ್ದಾರೆ. ಲಿಂಗಾಯತ, ಬ್ರಾಹ್ಮಣ ಸಮುದಾಯದಲ್ಲೂ ಬಡವರಿದ್ದಾರೆ. ಅವರಿಗೆ ನ್ಯಾಯ ಸಿಗುವುದು ಬೇಡವೇ? ಎಂದು ಪ್ರಶ್ನಿಸಿದರು.
ಜಾತಿ ಗಣತಿಗೆ ನಮ್ಮ ಮನೆಗೆ ಯಾರೂ ಬಂದಿಲ್ಲ ಎಂದು ಈಗ ಹೇಳುವ ನಿಖಿಲ್ ಕುಮಾರಸ್ವಾಮಿ ಅವರು ಈ ವಿಷಯವನ್ನು ಆಗಲೇ ಯಾಕೆ ಸಂಬಂಧಪಟ್ಟವರನ್ನು ಪ್ರಶ್ನೆ ಮಾಡಲಿಲ್ಲ. ಈಗ ನಮ್ಮ ಮನೆಗೆ ಬಂದಿಲ್ಲ ಎಂದು ವಿರೋಧ ಮಾಡುವಿರಾದರೆ ಖಂಡಿತಾ ನೀವು ಶಾಸಕರಾಗಲು ಅನರ್ಹರರು ಎಂದು ಕಿಡಿಕಾರಿದರು.
ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಯೋಗೇಶ್ ಉಪ್ಪಾರ್ ಮಾತನಾಡಿದರು. ಜಿಲ್ಲಾ ಕುಂಬಾರರ ಸಂಘದ ಅಧ್ಯಕ್ಷ ಎನ್.ಎಸ್.ಪ್ರಕಾಶ್, ಜಿಲ್ಲಾ ಮಡಿವಾಳ ಸಂಘದ ಉಪಾಧ್ಯಕ್ಷ ಕೇಶವ್ ವಿಜಿ, ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಯೋಗೇಶ್ ಉಪ್ಪಾರ್, ಕರ್ನಾಟಕ ದಲಿತ ಚಳವಳಿ ನವ ನಿರ್ಮಾಣ ವೇದಿಕೆ ಹೊರಳ ವಾಡಿ ನಂಜುಂಡಸ್ವಾಮಿ, ಬಂಗವಾದಿ ನಾರಾಯಣಪ್ಪ, ಹಿಂದುಳಿದ ವರ್ಗಗಳ ಮುಖಂಡರರಾದ ಲೋಕೇಶ್ ಕುಮಾರ್ ಮಾದಾಪುರ, ಪರಿಶಿಷ್ಟ ಪಂಗಡಗಳ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಶಿಂಷಾ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…