ಮೈಸೂರು ನಗರ

ಜಯಪ್ರಕಾಶ್ ಹೆಗಡೆ ಆಯೋಗದ ಜಾತಿಗಣತಿ ವರದಿ ವೈಜ್ಞಾನಿಕ : ಕೆ.ಎಸ್.ಶಿವರಾಮು ಪ್ರತಿಪಾದನೆ

ಮೈಸೂರು: ಎಲ್ಲಾ ಸಮುದಾಯಗಳಿಗೂ ಸಮಾನವಾದ ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ 2015ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯದ 2 ಲಕ್ಷ ಜನರಿಂದ ಮಾಹಿತಿ ಪಡೆದು 180 ಕೋಟಿ ರೂ. ಹಣ ವೆಚ್ಚ ಮಾಡಿ ಜಾತಿಗಣತಿಯನ್ನು ಮಾಡಿಸಿದ್ದಾರೆ. ಹಾಗಾಗಿ ಜಯಪ್ರಕಾಶ್ ಹೆಗಡೆ ಆಯೋಗ ನೀಡಿರುವ ಜಾತಿಗಣತಿ ವರದಿ ವೈಜ್ಞಾನಿಕವಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಸರ್ಕಾರ ಈ ವರದಿ ತಯಾರಿಸಿದೆ. ಈ ಜಾತಿ ಗಣತಿ ವರದಿ ಶೇ.95ರಷ್ಟು ಸತ್ಯಾಂಶದಿಂದ ಕೂಡಿದೆ. ಆದರೆ, ಇದನ್ನು ಕೇವಲ ರಾಜಕೀಯ ಕಾರಣಗಳಿಗಾಗಿ ಮಾತ್ರ ಕೆಲವು ಮೇಲ್ವರ್ಗದವರು ವಿರೋಧಿಸುತ್ತಿದ್ದಾರೆಯೇ ಹೊರತು ಬೇರಾವ ಕಾರಣವೂ ಇಲ್ಲ ಎಂದು ಕಿಡಿಕಾರಿದರು.

ಒಂದು ವೇಳೆ ಈ ಜಾತಿ ಗಣತಿಯ ವರದಿಯಲ್ಲಿ ಏನಾದರೂ ಲೋಪದೋಷಗಳಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ. ಅದನ್ನು ಬಿಟ್ಟು ಅನಾವಶ್ಯಕವಾಗಿ ಜಾತಿ ಜಾತಿ ಎಂದು ಬೇರೆ ಧರ್ಮದವರ, ಬೇರೆ ಜಾತಿಯವರ ಬಗ್ಗೆ ಕೀಳಾಗಿ ಕಾಣಬೇಡಿ. ಒಕ್ಕಲಿಗ ಸಮುದಾಯದಲ್ಲೂ ಬಡವರಿದ್ದಾರೆ. ಲಿಂಗಾಯತ, ಬ್ರಾಹ್ಮಣ ಸಮುದಾಯದಲ್ಲೂ ಬಡವರಿದ್ದಾರೆ. ಅವರಿಗೆ ನ್ಯಾಯ ಸಿಗುವುದು ಬೇಡವೇ? ಎಂದು ಪ್ರಶ್ನಿಸಿದರು.

ಜಾತಿ ಗಣತಿಗೆ ನಮ್ಮ ಮನೆಗೆ ಯಾರೂ ಬಂದಿಲ್ಲ ಎಂದು ಈಗ ಹೇಳುವ ನಿಖಿಲ್ ಕುಮಾರಸ್ವಾಮಿ ಅವರು ಈ ವಿಷಯವನ್ನು ಆಗಲೇ ಯಾಕೆ ಸಂಬಂಧಪಟ್ಟವರನ್ನು ಪ್ರಶ್ನೆ ಮಾಡಲಿಲ್ಲ. ಈಗ ನಮ್ಮ ಮನೆಗೆ ಬಂದಿಲ್ಲ ಎಂದು ವಿರೋಧ ಮಾಡುವಿರಾದರೆ ಖಂಡಿತಾ ನೀವು ಶಾಸಕರಾಗಲು ಅನರ್ಹರರು ಎಂದು ಕಿಡಿಕಾರಿದರು.

ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಯೋಗೇಶ್ ಉಪ್ಪಾರ್ ಮಾತನಾಡಿದರು. ಜಿಲ್ಲಾ ಕುಂಬಾರರ ಸಂಘದ ಅಧ್ಯಕ್ಷ ಎನ್.ಎಸ್.ಪ್ರಕಾಶ್, ಜಿಲ್ಲಾ ಮಡಿವಾಳ ಸಂಘದ ಉಪಾಧ್ಯಕ್ಷ ಕೇಶವ್ ವಿಜಿ, ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಯೋಗೇಶ್ ಉಪ್ಪಾರ್, ಕರ್ನಾಟಕ ದಲಿತ ಚಳವಳಿ ನವ ನಿರ್ಮಾಣ ವೇದಿಕೆ ಹೊರಳ ವಾಡಿ ನಂಜುಂಡಸ್ವಾಮಿ, ಬಂಗವಾದಿ ನಾರಾಯಣಪ್ಪ, ಹಿಂದುಳಿದ ವರ್ಗಗಳ ಮುಖಂಡರರಾದ ಲೋಕೇಶ್ ಕುಮಾರ್ ಮಾದಾಪುರ, ಪರಿಶಿಷ್ಟ ಪಂಗಡಗಳ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಶಿಂಷಾ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

6 mins ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

5 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

5 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

5 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

5 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

5 hours ago