ಮೈಸೂರು ನಗರ

ಜಯಪ್ರಕಾಶ್ ಹೆಗಡೆ ಆಯೋಗದ ಜಾತಿಗಣತಿ ವರದಿ ವೈಜ್ಞಾನಿಕ : ಕೆ.ಎಸ್.ಶಿವರಾಮು ಪ್ರತಿಪಾದನೆ

ಮೈಸೂರು: ಎಲ್ಲಾ ಸಮುದಾಯಗಳಿಗೂ ಸಮಾನವಾದ ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ 2015ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯದ 2 ಲಕ್ಷ ಜನರಿಂದ ಮಾಹಿತಿ ಪಡೆದು 180 ಕೋಟಿ ರೂ. ಹಣ ವೆಚ್ಚ ಮಾಡಿ ಜಾತಿಗಣತಿಯನ್ನು ಮಾಡಿಸಿದ್ದಾರೆ. ಹಾಗಾಗಿ ಜಯಪ್ರಕಾಶ್ ಹೆಗಡೆ ಆಯೋಗ ನೀಡಿರುವ ಜಾತಿಗಣತಿ ವರದಿ ವೈಜ್ಞಾನಿಕವಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಸರ್ಕಾರ ಈ ವರದಿ ತಯಾರಿಸಿದೆ. ಈ ಜಾತಿ ಗಣತಿ ವರದಿ ಶೇ.95ರಷ್ಟು ಸತ್ಯಾಂಶದಿಂದ ಕೂಡಿದೆ. ಆದರೆ, ಇದನ್ನು ಕೇವಲ ರಾಜಕೀಯ ಕಾರಣಗಳಿಗಾಗಿ ಮಾತ್ರ ಕೆಲವು ಮೇಲ್ವರ್ಗದವರು ವಿರೋಧಿಸುತ್ತಿದ್ದಾರೆಯೇ ಹೊರತು ಬೇರಾವ ಕಾರಣವೂ ಇಲ್ಲ ಎಂದು ಕಿಡಿಕಾರಿದರು.

ಒಂದು ವೇಳೆ ಈ ಜಾತಿ ಗಣತಿಯ ವರದಿಯಲ್ಲಿ ಏನಾದರೂ ಲೋಪದೋಷಗಳಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಸಾಧ್ಯವಿದೆ. ಅದನ್ನು ಬಿಟ್ಟು ಅನಾವಶ್ಯಕವಾಗಿ ಜಾತಿ ಜಾತಿ ಎಂದು ಬೇರೆ ಧರ್ಮದವರ, ಬೇರೆ ಜಾತಿಯವರ ಬಗ್ಗೆ ಕೀಳಾಗಿ ಕಾಣಬೇಡಿ. ಒಕ್ಕಲಿಗ ಸಮುದಾಯದಲ್ಲೂ ಬಡವರಿದ್ದಾರೆ. ಲಿಂಗಾಯತ, ಬ್ರಾಹ್ಮಣ ಸಮುದಾಯದಲ್ಲೂ ಬಡವರಿದ್ದಾರೆ. ಅವರಿಗೆ ನ್ಯಾಯ ಸಿಗುವುದು ಬೇಡವೇ? ಎಂದು ಪ್ರಶ್ನಿಸಿದರು.

ಜಾತಿ ಗಣತಿಗೆ ನಮ್ಮ ಮನೆಗೆ ಯಾರೂ ಬಂದಿಲ್ಲ ಎಂದು ಈಗ ಹೇಳುವ ನಿಖಿಲ್ ಕುಮಾರಸ್ವಾಮಿ ಅವರು ಈ ವಿಷಯವನ್ನು ಆಗಲೇ ಯಾಕೆ ಸಂಬಂಧಪಟ್ಟವರನ್ನು ಪ್ರಶ್ನೆ ಮಾಡಲಿಲ್ಲ. ಈಗ ನಮ್ಮ ಮನೆಗೆ ಬಂದಿಲ್ಲ ಎಂದು ವಿರೋಧ ಮಾಡುವಿರಾದರೆ ಖಂಡಿತಾ ನೀವು ಶಾಸಕರಾಗಲು ಅನರ್ಹರರು ಎಂದು ಕಿಡಿಕಾರಿದರು.

ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಯೋಗೇಶ್ ಉಪ್ಪಾರ್ ಮಾತನಾಡಿದರು. ಜಿಲ್ಲಾ ಕುಂಬಾರರ ಸಂಘದ ಅಧ್ಯಕ್ಷ ಎನ್.ಎಸ್.ಪ್ರಕಾಶ್, ಜಿಲ್ಲಾ ಮಡಿವಾಳ ಸಂಘದ ಉಪಾಧ್ಯಕ್ಷ ಕೇಶವ್ ವಿಜಿ, ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಯೋಗೇಶ್ ಉಪ್ಪಾರ್, ಕರ್ನಾಟಕ ದಲಿತ ಚಳವಳಿ ನವ ನಿರ್ಮಾಣ ವೇದಿಕೆ ಹೊರಳ ವಾಡಿ ನಂಜುಂಡಸ್ವಾಮಿ, ಬಂಗವಾದಿ ನಾರಾಯಣಪ್ಪ, ಹಿಂದುಳಿದ ವರ್ಗಗಳ ಮುಖಂಡರರಾದ ಲೋಕೇಶ್ ಕುಮಾರ್ ಮಾದಾಪುರ, ಪರಿಶಿಷ್ಟ ಪಂಗಡಗಳ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಶಿಂಷಾ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿಗಿಂತ ಮಡಿಕೇರಿಯ ವಾಯುಗುಣಮಟ್ಟವೇ ಉತ್ತಮ!

ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…

15 mins ago

ತಮಿಳುನಾಡು ಸಿಎಂ ವಿಜಯ್‌ ಸಾಧನೆ ಹೊಗಳಿದ ರಜಿನಿಕಾಂತ್‌

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ‌ ಚನ್ನೈನ ತಮ್ಮ ನಿವಾಸದಲ್ಲಿ…

43 mins ago

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ : ದಕ್ಷಿಣ ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…

4 hours ago

ಚಹಾದ ಸುತ್ತಮುತ್ತ ಹೀಗೊಂದು ಮಾತುಕತೆ

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…

4 hours ago

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

6 hours ago