ಮೈಸೂರು: ನಾನು ಭ್ರಷ್ಟಾಚಾರ ಮಾಡಿರೋದನ್ನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಯತ್ನಾಳ್ಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಬಹಿರಂಗ ಸವಾಲು ಹಾಕಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ ಪಾತ್ರವೂ ಇದೇ ಎಂಬ ಶಾಸಕ ಯತ್ನಾಳ್ ಹೇಳಿಕೆಗೆ ಕೆರಳಿ ಕೆಂಡವಾದರು. ಈ ವೇಳೆ ಯತ್ನಾಳ್ಗೆ ಏಕವಚನದಲ್ಲೇ ಬಹಿರಂಗ ಸವಾಲು ಹಾಕಿದರು.
ನನ್ನ ಯೋಗ್ಯತೆ, ನನ್ನ ಆಸ್ತಿ ಲೆಕ್ಕ ನಿನಗೇನು ಗೊತ್ತು? ನಿನಗೆ ತಾಕತ್ ಇದ್ದರೆ ನಿನ್ನ ಬಳಿ ನನ್ನದೇನಿದೆ ಎಂಬುದನ್ನು ಬಹಿರಂಗಪಡಿಸು. ನಿನ್ನ ವಿಚಾರವು ನನಗೆ ಗೊತ್ತಿದೆ. ನಾನು ಬಹಿರಂಗಪಡಿಸುತ್ತೇನೆ. ನಾನು ಭ್ರಷ್ಟಾಚಾರ ಮಾಡಿರೋದನ್ನು ನೀನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಶಾಸಕನಾಗಿ ಬಂದಾಗ ಇದ್ದ ಆಸ್ತಿಗೂ, ಇವತ್ತಿನ ಆಸ್ತಿಗೂ ಏನು ವ್ಯತ್ಯಾಸ ಇದೆ ಅನ್ನೋದನ್ನು ನೀನು ತೆಗಿ. ಸೌಹಾರ್ಧ ಬ್ಯಾಂಕಿನ ಹೆಸರಿನಲ್ಲಿ ಹಣ ಡೆಪಾಸಿಟ್ ಮಾಡಿಸಿಕೊಂಡು, ಅದನ್ನು ಎಲ್ಲಿಗೆ ಹೂಡಿಕೆ ಮಾಡಿದ್ಯಾ ಎಂಬುದು ನನಗೆ ಗೊತ್ತಿಲ್ವ? ಎಲ್ಲದನ್ನೂ ತೆಗಿಬೇಕಾ? ಎಂದು ಶಾಸಕ ಯತ್ನಾಳ್ ವಿರುದ್ಧ ಕೆಂಡಾಮಂಡಲರಾದರು.
‘ಶ್ರೀ ಕ್ಷೇತ್ರ ಕೈವಾರ ತಾತಯ್ಯ’ ಮತ್ತು ‘ದೇವನಹಳ್ಳಿ’ ಚಿತ್ರಗಳನ್ನು ನಿರ್ದೇಶಿಸಿರುವ ಪಲ್ಲಕ್ಕಿ ರಾಧಾಕೃಷ್ಣ, ಆನಂತರ ಒಂದೆರಡು ಚಿತ್ರಗಳನ್ನು ನಿರ್ದೇಶಿಸುವುದಾಗಿ ಸುದ್ದಿಯಾದರೂ,…
ವ್ಯವಸ್ಥೆಯ ವಿರುದ್ಧ ಹೋರಾಡುವ ಪತ್ರಕರ್ತರ ಕುರಿತಾಗಿ ಹಲವು ಸಿನಿಮಾಗಳು ಬಂದಿವೆ. ಇದೀಗ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ…
ಪುನೀತ್ ರಾಜ್ಕುಮಾರ್ ಇದ್ದಿದ್ದರೆ, ದೊಡ್ಡ ಸಂಭ್ರಮ ಮನೆ ಮಾಡಿರುತ್ತಿತ್ತು. ಮಾರ್ಚ್ ೧೭ಕ್ಕೆ ಅವರು ೫೦ ಮುಗಿಸಿ,೫೧ನೇ ವರ್ಷಕ್ಕೆಕಾಲಿಡುತ್ತಿದ್ದರು. ಪುನೀತ್ ಇಲ್ಲದ…
ಮನದ ಕಡಲು ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ರಮ್ಯಾ ಕನ್ನಡ ಚಿತ್ರರಂಗದಲ್ಲಿ ನಾಯಕಿಯರಿಗೆ ಕಡಿಮೆ ಸಂಭಾವನೆ ನೀಡಲಾಗುತ್ತದೆ. ಜೊತೆಗೆ ಒಳ್ಳೆಯ…
ಮೈಸೂರಿನ ಕುಂಬಾರ ಕೊಪ್ಪಲು, ಹೆಬ್ಬಾಳು, ವಿಜಯನಗರ ಎರಡನೇ ಹಂತ ಮತ್ತು ಮಂಚೇಗೌಡನ ಕೊಪ್ಪಲಿಗೆ ಸಂಪರ್ಕ ಕಲ್ಪಿಸುವ ಸೂರ್ಯ ಬೇಕರಿ ವೃತ್ತದ…
ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆ ಜನರು ಹಬ್ಬಗಳನ್ನು ಆತಂಕದಲ್ಲೇ ಆಚರಿಸುವಂತೆ ಮಾಡಿತ್ತು. ಇಂತಹ ಆತಂಕದ ಸಂದರ್ಭದಲ್ಲಿಯೂ ಸೂಕ್ಷ್ಮ ಪ್ರದೇಶವಾದ ನಗರದ…