ಮೈಸೂರು: ನಾನು ಭ್ರಷ್ಟಾಚಾರ ಮಾಡಿರೋದನ್ನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಯತ್ನಾಳ್ಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಬಹಿರಂಗ ಸವಾಲು ಹಾಕಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ ಪಾತ್ರವೂ ಇದೇ ಎಂಬ ಶಾಸಕ ಯತ್ನಾಳ್ ಹೇಳಿಕೆಗೆ ಕೆರಳಿ ಕೆಂಡವಾದರು. ಈ ವೇಳೆ ಯತ್ನಾಳ್ಗೆ ಏಕವಚನದಲ್ಲೇ ಬಹಿರಂಗ ಸವಾಲು ಹಾಕಿದರು.
ನನ್ನ ಯೋಗ್ಯತೆ, ನನ್ನ ಆಸ್ತಿ ಲೆಕ್ಕ ನಿನಗೇನು ಗೊತ್ತು? ನಿನಗೆ ತಾಕತ್ ಇದ್ದರೆ ನಿನ್ನ ಬಳಿ ನನ್ನದೇನಿದೆ ಎಂಬುದನ್ನು ಬಹಿರಂಗಪಡಿಸು. ನಿನ್ನ ವಿಚಾರವು ನನಗೆ ಗೊತ್ತಿದೆ. ನಾನು ಬಹಿರಂಗಪಡಿಸುತ್ತೇನೆ. ನಾನು ಭ್ರಷ್ಟಾಚಾರ ಮಾಡಿರೋದನ್ನು ನೀನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಶಾಸಕನಾಗಿ ಬಂದಾಗ ಇದ್ದ ಆಸ್ತಿಗೂ, ಇವತ್ತಿನ ಆಸ್ತಿಗೂ ಏನು ವ್ಯತ್ಯಾಸ ಇದೆ ಅನ್ನೋದನ್ನು ನೀನು ತೆಗಿ. ಸೌಹಾರ್ಧ ಬ್ಯಾಂಕಿನ ಹೆಸರಿನಲ್ಲಿ ಹಣ ಡೆಪಾಸಿಟ್ ಮಾಡಿಸಿಕೊಂಡು, ಅದನ್ನು ಎಲ್ಲಿಗೆ ಹೂಡಿಕೆ ಮಾಡಿದ್ಯಾ ಎಂಬುದು ನನಗೆ ಗೊತ್ತಿಲ್ವ? ಎಲ್ಲದನ್ನೂ ತೆಗಿಬೇಕಾ? ಎಂದು ಶಾಸಕ ಯತ್ನಾಳ್ ವಿರುದ್ಧ ಕೆಂಡಾಮಂಡಲರಾದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…