ಮೈಸೂರು: ನಾನು ಭ್ರಷ್ಟಾಚಾರ ಮಾಡಿರೋದನ್ನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಯತ್ನಾಳ್ಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಬಹಿರಂಗ ಸವಾಲು ಹಾಕಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ ಪಾತ್ರವೂ ಇದೇ ಎಂಬ ಶಾಸಕ ಯತ್ನಾಳ್ ಹೇಳಿಕೆಗೆ ಕೆರಳಿ ಕೆಂಡವಾದರು. ಈ ವೇಳೆ ಯತ್ನಾಳ್ಗೆ ಏಕವಚನದಲ್ಲೇ ಬಹಿರಂಗ ಸವಾಲು ಹಾಕಿದರು.
ನನ್ನ ಯೋಗ್ಯತೆ, ನನ್ನ ಆಸ್ತಿ ಲೆಕ್ಕ ನಿನಗೇನು ಗೊತ್ತು? ನಿನಗೆ ತಾಕತ್ ಇದ್ದರೆ ನಿನ್ನ ಬಳಿ ನನ್ನದೇನಿದೆ ಎಂಬುದನ್ನು ಬಹಿರಂಗಪಡಿಸು. ನಿನ್ನ ವಿಚಾರವು ನನಗೆ ಗೊತ್ತಿದೆ. ನಾನು ಬಹಿರಂಗಪಡಿಸುತ್ತೇನೆ. ನಾನು ಭ್ರಷ್ಟಾಚಾರ ಮಾಡಿರೋದನ್ನು ನೀನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ಶಾಸಕನಾಗಿ ಬಂದಾಗ ಇದ್ದ ಆಸ್ತಿಗೂ, ಇವತ್ತಿನ ಆಸ್ತಿಗೂ ಏನು ವ್ಯತ್ಯಾಸ ಇದೆ ಅನ್ನೋದನ್ನು ನೀನು ತೆಗಿ. ಸೌಹಾರ್ಧ ಬ್ಯಾಂಕಿನ ಹೆಸರಿನಲ್ಲಿ ಹಣ ಡೆಪಾಸಿಟ್ ಮಾಡಿಸಿಕೊಂಡು, ಅದನ್ನು ಎಲ್ಲಿಗೆ ಹೂಡಿಕೆ ಮಾಡಿದ್ಯಾ ಎಂಬುದು ನನಗೆ ಗೊತ್ತಿಲ್ವ? ಎಲ್ಲದನ್ನೂ ತೆಗಿಬೇಕಾ? ಎಂದು ಶಾಸಕ ಯತ್ನಾಳ್ ವಿರುದ್ಧ ಕೆಂಡಾಮಂಡಲರಾದರು.
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…