kj george
ಮೈಸೂರು: ನವೆಂಬರ್ನಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದು, ಇದೆಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ನವೆಂಬರ್ ತಿಂಗಳಿನಲ್ಲಿ ಸಿಎಂ ಬದಲಾವಣೆ ಆಗುತ್ತದೆ ಎಂಬ ವಿಚಾರ ಭಾರೀ ಚರ್ಚೆಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ 5 ವರ್ಷ ಆದರೂ ಇರಬಹುದು. 10 ವರ್ಷ ಆದರೂ ಇರಬಹುದು. ಇದೆಲ್ಲವನ್ನು ನಿರ್ಧರಿಸೋದು ಹೈಕಮಾಂಡ್. ನವೆಂಬರ್ನಲ್ಲಿ ಸಿಎಂ ಬದಲಾವಣೆ ಆಗುತ್ತೆ ಎಂದು ನೀವು ಕೇಳುತ್ತಿರುವ ಹಿನ್ನೆಲೆಯಲ್ಲಿ ಇದರ ಬಗ್ಗೆ ಮಾತನಾಡುತ್ತಿದ್ದೇನೆ.
ಇದೆಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸದ್ಯಕ್ಕೆ ಶಾಸಕರು ಹಾಗೂ ಕಾಂಗ್ರೆಸ್ ಹೈ ಕಮಾಂಡ್ ಸಿಎಂ ಸಿದ್ದರಾಮಯ್ಯ ಪರವಿದೆ. ನೀವು ನನ್ನ ಬಾಯಿಯಲ್ಲಿ ಬದಲಾವಣೆ ಮಾತು ಹೇಳಿಸಲು ಪ್ರಯತ್ನ ಮಾಡುತ್ತಿದ್ದೀರಾ. ಆದರೆ ಸಿಎಂ ಬದಲಾವಣೆ ಅಗುತ್ತೋ ಇಲ್ವೋ, ಅದೆಲ್ಲ ನನಗೆ ಗೊತ್ತಿಲ್ಲ. ಒಂದು ವೇಳೆ ನವೆಂಬರ್ನಲ್ಲಿ ಸಿಎಂ ಬದಲಾವಣೆ ಆದ್ರೆ ಆವಾಗಲೇ ಉತ್ತರ ಕೊಡುತ್ತೇನೆ ಎಂದು ಸಿಎಂ ಬದಲಾವಣೆ ಕುರಿತು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…