ಮೈಸೂರು ನಗರ

ಸಂಸದರಾದ ಮೇಲೆ ಟಾರ್ಗೆಟ್‌ ಮಾಡಲಾಗುತ್ತಿದೆ: ಸಂಸದ ಯದುವೀರ್‌ ಹೇಳಿಕೆಗೆ ಶಾಸಕ ಕೆ.ಹರೀಶ್‌ ಗೌಡ ತಿರುಗೇಟು

ಮೈಸೂರು: ಸಂಸದರಾದ ಮೇಲೆ ನನ್ನನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂಬ ಸಂಸದ ಯದುವೀರ್‌ ಅವರ ಹೇಳಿಕೆಗೆ ಶಾಸಕ ಕೆ.ಹರೀಶ್‌ ಗೌಡ ತಿರುಗೇಟು ನೀಡಿದ್ದಾರೆ.

ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಈ ಕುರಿತು ಇಂದು(ಡಿಸೆಂಬರ್‌.27) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಯದುವೀರ್‌ ಅವರಿಗೆ ಬಹುಶಃ ಭ್ರಮೆ ಇರಬೇಕು. ಲೋಕಸಭಾ ಸಂಸದ ಚುನಾವಣೆಗೆ ನಮ್ಮ ಪಕ್ಷದಿಂದ ಎಂ.ಲಕ್ಷ್ಮಣ್‌ ಅವರು ಹಾಗೂ ಅವರು ಸ್ಪರ್ಧಿಸಿದ್ದರು. ಚುನಾವಣೆ ಫಲಿತಾಂಶ ಬಂದ ಬಳಿಕ ಲಕ್ಷ್ಮಣ್‌ ಸೋತಿದ್ದು, ಯದುವೀರ್‌ ಗೆದ್ದಿದ್ದಾರೆ. ಅದನ್ನು ನಮ್ಮ ಪಕ್ಷ ಒಪ್ಪಿಕೊಂಡಿದೆ, ಆದರೆ ನಾವು ಯಾರ ವಿರುದ್ಧವೂ ಷ್ಯಡಂತ್ರವನ್ನು ಮಾಡಿಲ್ಲ. ಅವರಿಗೆ ಹಾಗೇ ಅನ್ನಿಸುತ್ತಿದೆ ಎಂದರೆ ಅದಕ್ಕೆ ನಾವೇನು ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾವು ಯಾಕೆ ಅವರನ್ನು ಟಾರ್ಗೆಟ್‌ ಮಾಡುತ್ತೇವೆ. ಯದುವೀರ್‌ಗೆ ನಮ್ಮ ಪಕ್ಷ ಟಾರ್ಗೆಟ್‌ ಮಾಡುತ್ತಿದೆ ಎಂದು ಅನಿಸಿದರೆ, ಅದನ್ನು ಅವರ ಹತ್ತಿರವೇ ಪ್ರಶ್ನಿಸಿ. ನಮಗೆ ಯದುವಂಶದ ಮೇಲೆ ಅಪಾರ ಗೌರವವಿದೆ. ಅವರನ್ನು ಟಾರ್ಗೆಟ್‌ ಮಾಡಿ ನಾವು ಏನ್ನನ್ನೂ ಸಾಧಿಸಬೇಕಾಗಿಲ್ಲ. ಇನ್ನೂ ಹೇಳಬೇಕೆಂದರೆ ಅವರ ಪಕ್ಷದವರೇ ಅವರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಅವರನ್ನೇ ಹೋಗಿ ಕೇಳಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅಭಿವೃದ್ಧಿಯ ಹರಿಕಾರ

ಇನ್ನು ಇದೇ ಸಂದರ್ಭದಲ್ಲಿ ಪ್ರಿನ್ಸೆಸ್‌ ರಸ್ತೆಗೆ(ಕೆಆರ್‌ಎಸ್‌) ಸಿದ್ದರಾಮಯ್ಯ ಆರೋಗ್ಯ ಮಾರ್ಗ ಹೆಸರಿಡಲು ಬಿಜೆಪಿ ವಿರೋಧಿಸುತ್ತಿರುವ ಬಗ್ಗೆ ಮಾತನಾಡಿದ ಅವರು, ಬಿಜೆಪಿಯವರು ಮಹಾತ್ಮ ಗಾಂಧೀಜಿ ಅವರನ್ನೇ ಒಪ್ಪಲಿಲ್ಲ. ಆ ಪಕ್ಷದವರಿಗೆ ನಾಧುರಾಮ್‌ ಗೂಡ್ಸೆಯನ್ನು ಮಹಾತ್ಮ ಎಂದು ಹೇಳುತ್ತಾರೆ. ಸಿದ್ದರಾಮಯ್ಯ ಅವರ ಹೆಸರಿಡಲು ಪಕ್ಷದ ರಾಜಕಾರಣ ಮಾಡಬಾರದು. ಸಿದ್ದರಾಮಯ್ಯ 2ನೇ ಬಾರಿ ಮುಖ್ಯಮಂತ್ರಿಯಾಗಿ, 14 ಸಲ ಹಣಕಾಸು ಬಜೆಟ್‌ ಮಂಡಿಸಿದ್ದಾರೆ. ಅಲ್ಲದೇ, ಮೈಸೂರಿಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಜಾರಿಗೊಳಿಸಿ ಮೈಸೂರು ಜಿಲ್ಲೆ ಹಾಗೂ ನಗರಕ್ಕೆ ಅಪಾರವಾದ ಕೊಡುಗೆ ನೀಡಿದವರು ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಪ್ರಿನ್ಸೆಸ್‌ ರಸ್ತೆರಯಲ್ಲಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ , ಆಯುರ್ವೇದ ಆಸ್ಪತ್ರೆ, ಜಯದೇವ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ, ಕಿದ್ವಾಯಿ ಹಾಗೂ ಚರಕ ಆಸ್ಪತ್ರೆ ಸೇರಿದಂತೆ ಅನೇಕ ಆಸ್ಪತ್ರೆಗಳನ್ನು ಮೈಸೂರಿಗೆ ನೀಡಿದ್ದಾರೆ. ಜೊತೆಗೆ ಜಿಲ್ಲಾ ಆಸ್ಪತ್ರೆಗೆ ನೂರು ಡಯಾಲಿಸೀಸ್ ಮತ್ತು ಬೆಡ್‌ಗಳನ್ನು ಹೆಚ್ಚುವರಿಯಾಗಿ ನೀಡಿದ್ದಾರೆ. ಈ ಎಲ್ಲಾ ಆಸ್ಪತ್ರೆಗಳು ಒಂದೇ ರಸ್ತೆಯಲ್ಲಿಯೇ ಇವೆ. ಮೈಸೂರು ನಗರಕ್ಕೆ
ಇಷ್ಟೆಲ್ಲಾ ಕೊಡುಗೆ ಕೊಟ್ಟಿರುವ ಅಭಿವೃದ್ಧಿಯ ಹರಿಕಾರ ಸಿದ್ದರಾಮಯ್ಯ ಅವರ ಹೆಸರಿಡಲು ವಿರೋಧಿಸುವುದು ಪ್ರತಿಭಟಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

10 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

12 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

20 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

20 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

20 hours ago