ಮೈಸೂರು ನಗರ

ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ವಜಾ: ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ತಿರುಗಿಬಿದ್ದ ನಾಯಕ ಸಮುದಾಯ

ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿರುವ ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ನಾಯಕ ಸಮುದಾಯ ತಿರುಗಿಬಿದ್ದಿದ್ದು, ಇದೇ ಸೋಮವಾರ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ನಾಯಕರ ಯುವ ಸೇನೆ ರಾಜ್ಯಾಧ್ಯಕ್ಷ ದೇವರಾಜ ಕಾಟೂರು ಅವರು, ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ವತಿಯಿಂದ ಸೋಮವಾರ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಕೆ.ಎನ್.ರಾಜಣ್ಣ ನಮ್ಮ ಸಮುದಾಯದ ಬಹುದೊಡ್ಡ ಶಕ್ತಿ. ನಮ್ಮ ಸಮುದಾಯ ಎಸ್.ಟಿ ಮೀಸಲು ಕ್ಷೇತ್ರಗಳಲ್ಲಿ ಎಲ್ಲಾ ಶಾಸಕರನ್ನು ಕಾಂಗ್ರೆಸ್ ಪಕ್ಷದವರನ್ನೇ ಆಯ್ಕೆ ಮಾಡಿದೆ. ಸರ್ಕಾರದಲ್ಲಿ ಸಮುದಾಯದ 15 ಜನ ಶಾಸಕರಿದ್ದಾರೆ.

ಇಂತಹ ದೊಡ್ಡ ಸಮುದಾಯಕ್ಕೆ ರಾಜಕೀಯವಾಗಿ ಕಾಂಗ್ರೆಸ್ ಅವಮಾನ ಮಾಡುತ್ತಿದೆ. ಯಾವುದೇ ತನಿಖೆ ನಡೆಸದೆ ನಾಗೇಂದ್ರರವರ ರಾಜೀನಾಮೆ ಪಡೆಯಲಾಯ್ತು. ಇದೀಗ ಕೆ.ಎನ್.ರಾಜಣ್ಣರನ್ನು ಸಚಿವ ಸ್ಥಾನದಿಂದ ವಜಾ ಮಾಡಿದ್ದಾರೆ. ನಾವೇ ಬೆಂಬಲಿಸಿದ್ದ ಸರ್ಕಾರದ ವಿರುದ್ಧ ಇದೀಗ ಬೀದಿಗಿಳಿಯುವ ಸಂದರ್ಭ ಬಂದಿದೆ.

ನಮ್ಮ ಹೋರಾಟದ ಮೂಲಕ ಕಾಂಗ್ರೆಸ್ ಹೈಕಮಾಂಡ್‌ಗೆ ತಕ್ಕ ಪಾಠ ಕಲಿಸುತ್ತೇವೆ. ಕೆ.ಎನ್.ರಾಜಣ್ಣರನ್ನು ಮರಳಿ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು. ನಾಗೇಂದ್ರ ಅವರ ಸ್ಥಾನಕ್ಕೆ ನಮ್ಮದೆ ಸಮುದಾಯದವರನ್ನು ಸಚಿವರನ್ನಾಗಿ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ದೊಡ್ಡ ಹಾನಿ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

54 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

55 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

57 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

58 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago