ಮೈಸೂರು ನಗರ

ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ವಜಾ: ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ತಿರುಗಿಬಿದ್ದ ನಾಯಕ ಸಮುದಾಯ

ಮೈಸೂರು: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ಅವರನ್ನು ವಜಾಗೊಳಿಸಿರುವ ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ನಾಯಕ ಸಮುದಾಯ ತಿರುಗಿಬಿದ್ದಿದ್ದು, ಇದೇ ಸೋಮವಾರ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ನಾಯಕರ ಯುವ ಸೇನೆ ರಾಜ್ಯಾಧ್ಯಕ್ಷ ದೇವರಾಜ ಕಾಟೂರು ಅವರು, ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ ವತಿಯಿಂದ ಸೋಮವಾರ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಕೆ.ಎನ್.ರಾಜಣ್ಣ ನಮ್ಮ ಸಮುದಾಯದ ಬಹುದೊಡ್ಡ ಶಕ್ತಿ. ನಮ್ಮ ಸಮುದಾಯ ಎಸ್.ಟಿ ಮೀಸಲು ಕ್ಷೇತ್ರಗಳಲ್ಲಿ ಎಲ್ಲಾ ಶಾಸಕರನ್ನು ಕಾಂಗ್ರೆಸ್ ಪಕ್ಷದವರನ್ನೇ ಆಯ್ಕೆ ಮಾಡಿದೆ. ಸರ್ಕಾರದಲ್ಲಿ ಸಮುದಾಯದ 15 ಜನ ಶಾಸಕರಿದ್ದಾರೆ.

ಇಂತಹ ದೊಡ್ಡ ಸಮುದಾಯಕ್ಕೆ ರಾಜಕೀಯವಾಗಿ ಕಾಂಗ್ರೆಸ್ ಅವಮಾನ ಮಾಡುತ್ತಿದೆ. ಯಾವುದೇ ತನಿಖೆ ನಡೆಸದೆ ನಾಗೇಂದ್ರರವರ ರಾಜೀನಾಮೆ ಪಡೆಯಲಾಯ್ತು. ಇದೀಗ ಕೆ.ಎನ್.ರಾಜಣ್ಣರನ್ನು ಸಚಿವ ಸ್ಥಾನದಿಂದ ವಜಾ ಮಾಡಿದ್ದಾರೆ. ನಾವೇ ಬೆಂಬಲಿಸಿದ್ದ ಸರ್ಕಾರದ ವಿರುದ್ಧ ಇದೀಗ ಬೀದಿಗಿಳಿಯುವ ಸಂದರ್ಭ ಬಂದಿದೆ.

ನಮ್ಮ ಹೋರಾಟದ ಮೂಲಕ ಕಾಂಗ್ರೆಸ್ ಹೈಕಮಾಂಡ್‌ಗೆ ತಕ್ಕ ಪಾಠ ಕಲಿಸುತ್ತೇವೆ. ಕೆ.ಎನ್.ರಾಜಣ್ಣರನ್ನು ಮರಳಿ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು. ನಾಗೇಂದ್ರ ಅವರ ಸ್ಥಾನಕ್ಕೆ ನಮ್ಮದೆ ಸಮುದಾಯದವರನ್ನು ಸಚಿವರನ್ನಾಗಿ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ದೊಡ್ಡ ಹಾನಿ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago