ಮೈಸೂರು ನಗರ

ಮೈಸೂರಿನಲ್ಲಿ ಶೀಘ್ರದಲ್ಲೇ ಕಲಾವೃತ್ತ ಕೇಂದ್ರ ಉದ್ಘಾಟನೆ

ಮೈಸೂರು: ಚಿತ್ರಕಲೆ ಪ್ರೋತ್ಸಾಹಿಸಲು ರಾಜ್ಯದೆಲ್ಲೆಡೆ 600 ಕಲಾವೃತ್ತ ಕೇಂದ್ರಗಳನ್ನು ಆರಂಭ ಮಾಡಲಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶೀಘ್ರದಲ್ಲೇ ಮೊದಲ ಕೇಂದ್ರ ಉದ್ಘಾಟನೆಗೊಳ್ಳಲಿದೆ.

ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆಯಲ್ಲಿ ಆಸಕ್ತಿ ಮೂಡಿಸಲು ಕರ್ನಾಟಕ ರಾಜ್ಯ ಲಲಿತ ಕಲೆ ಅಕಾಡೆಮಿ ಮುಂದಾಗಿದ್ದು, ರಾಜ್ಯದೆಲ್ಲೆಡೆ 600 ಕಲಾವೃತ್ತಗಳನ್ನು ಸ್ಥಾಪಿಸಲು ನಿರ್ಧಾರ ಮಾಡಿದೆ.

ಈ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಸರಾಸರಿ 20 ಕೇಂದ್ರಗಳ ಸ್ಥಾಪನೆಯೊಂದಿಗೆ ರಾಜ್ಯದಲ್ಲಿ 600 ಕಲಾವೃತ್ತ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಶಾಲಾ ವಿದ್ಯಾರ್ಥಿಗಳಲ್ಲಿ ಚಿತ್ರಕಲೆಯ ಅಭಿರುಚಿಯನ್ನು ಬೆಳೆಸಲು ಅಕಾಡೆಮಿ ಯೋಜನೆ ರೂಪಿಸಿದೆ.

ಪ್ರಾಯೋಗಿಕವಾಗಿ ಈ ಕಲಾವೃತ್ತ ಯೋಜನೆ ಸೇರಿದಂತೆ ಬೆಂಗಳೂರು, ಮಂಗಳೂರು, ಹಾಸನ ಹಾಗೂ ತುಮಕೂರಿನಲ್ಲಿ ಆರಂಭಿಸಲು ನಿರ್ಧಾರ ಮಾಡಲಾಗಿದೆ. ಹಂತ ಹಂತವಾಗಿ ರಾಜ್ಯದೆಲ್ಲೆಡೆ ಈ ಯೋಜನೆಯನ್ನು ವಿಸ್ತರಿಸುವ ಉದ್ದೇಶವಿದೆ.

ಕಲೆಯ ಪ್ರಕಾರಗಳಾದ ಸಂಗೀತ, ನೃತ್ಯ, ಸಾಹಿತ್ಯ ತನ್ನದೇ ಆದ ವ್ಯಾಪ್ತಿಯಲ್ಲಿ ಜನ ಸಾಮಾನ್ಯರದಲ್ಲಿ ಹಾಸು ಹೊಕ್ಕಾಗಿದೆ. ಆದರೆ, ಚಿತ್ರಕಲೆಯು ದೊಡ್ಡ ಮಟ್ಟದಲ್ಲಿ ಜನ ಸಾಮಾನ್ಯರೊಂದಿಗೆ ಹೆಚ್ಚು ಸಂಪರ್ಕವಿಲ್ಲದಂತಾಗಿದೆ.

ಈ ಚಿತ್ರಕಲೆಯ ಬಗ್ಗೆ ಸಾರ್ವಜನಿಕರಲ್ಲಿ ಆಸಕ್ತಿ ಇಲ್ಲದಿರುವುದರಿಂದ ಸೂಕ್ತ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಿದ್ದು, ಪ್ರತಿ ಜಿಲ್ಲೆಗಳಲ್ಲೂ ಕೇಂದ್ರಗಳನ್ನು ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ.

ಈ ಮೂಲಕ ಚಿತ್ರಕಲೆಯಲ್ಲಿ ಆಸಕ್ತಿ ಇರುವವರಿಗೆ ಒಂದು ವೇದಿಕೆಯೇ ಸೃಷ್ಟಿಯಾದಂತಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾರಾಷ್ಟ್ರದ ನೂತನ ಡಿಸಿಎಂ ಆಗಿ ಸುನೇತ್ರಾ ಪವಾರ್‌ ಅಧಿಕಾರ ಸ್ವೀಕಾರ

ಮುಂಬೈ: ಮಹಾರಾಷ್ಟ್ರದ ನೂತನ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಪವಾರ್‌ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಅಜಿತ್‌ ಪವಾರ್‌…

1 min ago

ಮಹಾರಾಷ್ಟ್ರ ಮಾಜಿ ಸಿಎಂ ಶರದ್‌ ಪವಾರ್‌ ಆಸ್ಪತ್ರೆಗೆ ದಾಖಲು: ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಎನ್‌ಸಿಪಿ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ಶರದ್‌ ಪವಾರ್‌ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ಪುಣೆಯ ಖಾಸಗಿ…

4 mins ago

ಬೇಸಿಗೆಗೂ ಮುನ್ನ ಕುಡಿಯುವ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ನಂಜನಗೂಡು: ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.…

9 mins ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪ್ರಕರಣವೊಂದರ ಆರೋಪಿ ಸೆರೆ

ಮೈಸೂರು: ಪ್ರಕರಣವೊಂದರ ಆರೋಪಿ ಸೆರೆ ಹಿಡಿಯುವಲ್ಲಿ ಮೈಸೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ನಗರ ದೇವರಾಜ ಪೊಲಿಸ್ ಠಾಣಾ…

14 mins ago

ಹೈಕಮಾಂಡ್‌ ಕರೆದರೆ ದೆಹಲಿಗೆ ಹೋಗುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,…

2 hours ago

ಹನೂರು| ಕಾವೇರಿ ನದಿ ದಾಟಿ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಆರಂಭಿಸಿದ ಭಕ್ತರು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…

2 hours ago