ಮೈಸೂರು ನಗರ

ಮೈಸೂರಿನಲ್ಲಿ ಶೀಘ್ರದಲ್ಲೇ ಕಲಾವೃತ್ತ ಕೇಂದ್ರ ಉದ್ಘಾಟನೆ

ಮೈಸೂರು: ಚಿತ್ರಕಲೆ ಪ್ರೋತ್ಸಾಹಿಸಲು ರಾಜ್ಯದೆಲ್ಲೆಡೆ 600 ಕಲಾವೃತ್ತ ಕೇಂದ್ರಗಳನ್ನು ಆರಂಭ ಮಾಡಲಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶೀಘ್ರದಲ್ಲೇ ಮೊದಲ ಕೇಂದ್ರ ಉದ್ಘಾಟನೆಗೊಳ್ಳಲಿದೆ.

ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆಯಲ್ಲಿ ಆಸಕ್ತಿ ಮೂಡಿಸಲು ಕರ್ನಾಟಕ ರಾಜ್ಯ ಲಲಿತ ಕಲೆ ಅಕಾಡೆಮಿ ಮುಂದಾಗಿದ್ದು, ರಾಜ್ಯದೆಲ್ಲೆಡೆ 600 ಕಲಾವೃತ್ತಗಳನ್ನು ಸ್ಥಾಪಿಸಲು ನಿರ್ಧಾರ ಮಾಡಿದೆ.

ಈ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಸರಾಸರಿ 20 ಕೇಂದ್ರಗಳ ಸ್ಥಾಪನೆಯೊಂದಿಗೆ ರಾಜ್ಯದಲ್ಲಿ 600 ಕಲಾವೃತ್ತ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಶಾಲಾ ವಿದ್ಯಾರ್ಥಿಗಳಲ್ಲಿ ಚಿತ್ರಕಲೆಯ ಅಭಿರುಚಿಯನ್ನು ಬೆಳೆಸಲು ಅಕಾಡೆಮಿ ಯೋಜನೆ ರೂಪಿಸಿದೆ.

ಪ್ರಾಯೋಗಿಕವಾಗಿ ಈ ಕಲಾವೃತ್ತ ಯೋಜನೆ ಸೇರಿದಂತೆ ಬೆಂಗಳೂರು, ಮಂಗಳೂರು, ಹಾಸನ ಹಾಗೂ ತುಮಕೂರಿನಲ್ಲಿ ಆರಂಭಿಸಲು ನಿರ್ಧಾರ ಮಾಡಲಾಗಿದೆ. ಹಂತ ಹಂತವಾಗಿ ರಾಜ್ಯದೆಲ್ಲೆಡೆ ಈ ಯೋಜನೆಯನ್ನು ವಿಸ್ತರಿಸುವ ಉದ್ದೇಶವಿದೆ.

ಕಲೆಯ ಪ್ರಕಾರಗಳಾದ ಸಂಗೀತ, ನೃತ್ಯ, ಸಾಹಿತ್ಯ ತನ್ನದೇ ಆದ ವ್ಯಾಪ್ತಿಯಲ್ಲಿ ಜನ ಸಾಮಾನ್ಯರದಲ್ಲಿ ಹಾಸು ಹೊಕ್ಕಾಗಿದೆ. ಆದರೆ, ಚಿತ್ರಕಲೆಯು ದೊಡ್ಡ ಮಟ್ಟದಲ್ಲಿ ಜನ ಸಾಮಾನ್ಯರೊಂದಿಗೆ ಹೆಚ್ಚು ಸಂಪರ್ಕವಿಲ್ಲದಂತಾಗಿದೆ.

ಈ ಚಿತ್ರಕಲೆಯ ಬಗ್ಗೆ ಸಾರ್ವಜನಿಕರಲ್ಲಿ ಆಸಕ್ತಿ ಇಲ್ಲದಿರುವುದರಿಂದ ಸೂಕ್ತ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಿದ್ದು, ಪ್ರತಿ ಜಿಲ್ಲೆಗಳಲ್ಲೂ ಕೇಂದ್ರಗಳನ್ನು ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ.

ಈ ಮೂಲಕ ಚಿತ್ರಕಲೆಯಲ್ಲಿ ಆಸಕ್ತಿ ಇರುವವರಿಗೆ ಒಂದು ವೇದಿಕೆಯೇ ಸೃಷ್ಟಿಯಾದಂತಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago