ಮೈಸೂರು ನಗರ

ಮೈಸೂರಿನಲ್ಲಿ ಶೀಘ್ರದಲ್ಲೇ ಕಲಾವೃತ್ತ ಕೇಂದ್ರ ಉದ್ಘಾಟನೆ

ಮೈಸೂರು: ಚಿತ್ರಕಲೆ ಪ್ರೋತ್ಸಾಹಿಸಲು ರಾಜ್ಯದೆಲ್ಲೆಡೆ 600 ಕಲಾವೃತ್ತ ಕೇಂದ್ರಗಳನ್ನು ಆರಂಭ ಮಾಡಲಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶೀಘ್ರದಲ್ಲೇ ಮೊದಲ ಕೇಂದ್ರ ಉದ್ಘಾಟನೆಗೊಳ್ಳಲಿದೆ.

ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆಯಲ್ಲಿ ಆಸಕ್ತಿ ಮೂಡಿಸಲು ಕರ್ನಾಟಕ ರಾಜ್ಯ ಲಲಿತ ಕಲೆ ಅಕಾಡೆಮಿ ಮುಂದಾಗಿದ್ದು, ರಾಜ್ಯದೆಲ್ಲೆಡೆ 600 ಕಲಾವೃತ್ತಗಳನ್ನು ಸ್ಥಾಪಿಸಲು ನಿರ್ಧಾರ ಮಾಡಿದೆ.

ಈ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಸರಾಸರಿ 20 ಕೇಂದ್ರಗಳ ಸ್ಥಾಪನೆಯೊಂದಿಗೆ ರಾಜ್ಯದಲ್ಲಿ 600 ಕಲಾವೃತ್ತ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಶಾಲಾ ವಿದ್ಯಾರ್ಥಿಗಳಲ್ಲಿ ಚಿತ್ರಕಲೆಯ ಅಭಿರುಚಿಯನ್ನು ಬೆಳೆಸಲು ಅಕಾಡೆಮಿ ಯೋಜನೆ ರೂಪಿಸಿದೆ.

ಪ್ರಾಯೋಗಿಕವಾಗಿ ಈ ಕಲಾವೃತ್ತ ಯೋಜನೆ ಸೇರಿದಂತೆ ಬೆಂಗಳೂರು, ಮಂಗಳೂರು, ಹಾಸನ ಹಾಗೂ ತುಮಕೂರಿನಲ್ಲಿ ಆರಂಭಿಸಲು ನಿರ್ಧಾರ ಮಾಡಲಾಗಿದೆ. ಹಂತ ಹಂತವಾಗಿ ರಾಜ್ಯದೆಲ್ಲೆಡೆ ಈ ಯೋಜನೆಯನ್ನು ವಿಸ್ತರಿಸುವ ಉದ್ದೇಶವಿದೆ.

ಕಲೆಯ ಪ್ರಕಾರಗಳಾದ ಸಂಗೀತ, ನೃತ್ಯ, ಸಾಹಿತ್ಯ ತನ್ನದೇ ಆದ ವ್ಯಾಪ್ತಿಯಲ್ಲಿ ಜನ ಸಾಮಾನ್ಯರದಲ್ಲಿ ಹಾಸು ಹೊಕ್ಕಾಗಿದೆ. ಆದರೆ, ಚಿತ್ರಕಲೆಯು ದೊಡ್ಡ ಮಟ್ಟದಲ್ಲಿ ಜನ ಸಾಮಾನ್ಯರೊಂದಿಗೆ ಹೆಚ್ಚು ಸಂಪರ್ಕವಿಲ್ಲದಂತಾಗಿದೆ.

ಈ ಚಿತ್ರಕಲೆಯ ಬಗ್ಗೆ ಸಾರ್ವಜನಿಕರಲ್ಲಿ ಆಸಕ್ತಿ ಇಲ್ಲದಿರುವುದರಿಂದ ಸೂಕ್ತ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಿದ್ದು, ಪ್ರತಿ ಜಿಲ್ಲೆಗಳಲ್ಲೂ ಕೇಂದ್ರಗಳನ್ನು ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ.

ಈ ಮೂಲಕ ಚಿತ್ರಕಲೆಯಲ್ಲಿ ಆಸಕ್ತಿ ಇರುವವರಿಗೆ ಒಂದು ವೇದಿಕೆಯೇ ಸೃಷ್ಟಿಯಾದಂತಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

4 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

4 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

4 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

4 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

6 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

6 hours ago