ಮೈಸೂರು ನಗರ

ಮೈಸೂರಿನಲ್ಲಿ ಶೀಘ್ರದಲ್ಲೇ ಕಲಾವೃತ್ತ ಕೇಂದ್ರ ಉದ್ಘಾಟನೆ

ಮೈಸೂರು: ಚಿತ್ರಕಲೆ ಪ್ರೋತ್ಸಾಹಿಸಲು ರಾಜ್ಯದೆಲ್ಲೆಡೆ 600 ಕಲಾವೃತ್ತ ಕೇಂದ್ರಗಳನ್ನು ಆರಂಭ ಮಾಡಲಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶೀಘ್ರದಲ್ಲೇ ಮೊದಲ ಕೇಂದ್ರ ಉದ್ಘಾಟನೆಗೊಳ್ಳಲಿದೆ.

ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆಯಲ್ಲಿ ಆಸಕ್ತಿ ಮೂಡಿಸಲು ಕರ್ನಾಟಕ ರಾಜ್ಯ ಲಲಿತ ಕಲೆ ಅಕಾಡೆಮಿ ಮುಂದಾಗಿದ್ದು, ರಾಜ್ಯದೆಲ್ಲೆಡೆ 600 ಕಲಾವೃತ್ತಗಳನ್ನು ಸ್ಥಾಪಿಸಲು ನಿರ್ಧಾರ ಮಾಡಿದೆ.

ಈ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಸರಾಸರಿ 20 ಕೇಂದ್ರಗಳ ಸ್ಥಾಪನೆಯೊಂದಿಗೆ ರಾಜ್ಯದಲ್ಲಿ 600 ಕಲಾವೃತ್ತ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಶಾಲಾ ವಿದ್ಯಾರ್ಥಿಗಳಲ್ಲಿ ಚಿತ್ರಕಲೆಯ ಅಭಿರುಚಿಯನ್ನು ಬೆಳೆಸಲು ಅಕಾಡೆಮಿ ಯೋಜನೆ ರೂಪಿಸಿದೆ.

ಪ್ರಾಯೋಗಿಕವಾಗಿ ಈ ಕಲಾವೃತ್ತ ಯೋಜನೆ ಸೇರಿದಂತೆ ಬೆಂಗಳೂರು, ಮಂಗಳೂರು, ಹಾಸನ ಹಾಗೂ ತುಮಕೂರಿನಲ್ಲಿ ಆರಂಭಿಸಲು ನಿರ್ಧಾರ ಮಾಡಲಾಗಿದೆ. ಹಂತ ಹಂತವಾಗಿ ರಾಜ್ಯದೆಲ್ಲೆಡೆ ಈ ಯೋಜನೆಯನ್ನು ವಿಸ್ತರಿಸುವ ಉದ್ದೇಶವಿದೆ.

ಕಲೆಯ ಪ್ರಕಾರಗಳಾದ ಸಂಗೀತ, ನೃತ್ಯ, ಸಾಹಿತ್ಯ ತನ್ನದೇ ಆದ ವ್ಯಾಪ್ತಿಯಲ್ಲಿ ಜನ ಸಾಮಾನ್ಯರದಲ್ಲಿ ಹಾಸು ಹೊಕ್ಕಾಗಿದೆ. ಆದರೆ, ಚಿತ್ರಕಲೆಯು ದೊಡ್ಡ ಮಟ್ಟದಲ್ಲಿ ಜನ ಸಾಮಾನ್ಯರೊಂದಿಗೆ ಹೆಚ್ಚು ಸಂಪರ್ಕವಿಲ್ಲದಂತಾಗಿದೆ.

ಈ ಚಿತ್ರಕಲೆಯ ಬಗ್ಗೆ ಸಾರ್ವಜನಿಕರಲ್ಲಿ ಆಸಕ್ತಿ ಇಲ್ಲದಿರುವುದರಿಂದ ಸೂಕ್ತ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಿದ್ದು, ಪ್ರತಿ ಜಿಲ್ಲೆಗಳಲ್ಲೂ ಕೇಂದ್ರಗಳನ್ನು ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ.

ಈ ಮೂಲಕ ಚಿತ್ರಕಲೆಯಲ್ಲಿ ಆಸಕ್ತಿ ಇರುವವರಿಗೆ ಒಂದು ವೇದಿಕೆಯೇ ಸೃಷ್ಟಿಯಾದಂತಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

6 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

10 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

10 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

10 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

10 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

10 hours ago