ಮೈಸೂರು ನಗರ

ಮೈಸೂರಿನಲ್ಲಿ ಶೀಘ್ರದಲ್ಲೇ ಕಲಾವೃತ್ತ ಕೇಂದ್ರ ಉದ್ಘಾಟನೆ

ಮೈಸೂರು: ಚಿತ್ರಕಲೆ ಪ್ರೋತ್ಸಾಹಿಸಲು ರಾಜ್ಯದೆಲ್ಲೆಡೆ 600 ಕಲಾವೃತ್ತ ಕೇಂದ್ರಗಳನ್ನು ಆರಂಭ ಮಾಡಲಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶೀಘ್ರದಲ್ಲೇ ಮೊದಲ ಕೇಂದ್ರ ಉದ್ಘಾಟನೆಗೊಳ್ಳಲಿದೆ.

ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆಯಲ್ಲಿ ಆಸಕ್ತಿ ಮೂಡಿಸಲು ಕರ್ನಾಟಕ ರಾಜ್ಯ ಲಲಿತ ಕಲೆ ಅಕಾಡೆಮಿ ಮುಂದಾಗಿದ್ದು, ರಾಜ್ಯದೆಲ್ಲೆಡೆ 600 ಕಲಾವೃತ್ತಗಳನ್ನು ಸ್ಥಾಪಿಸಲು ನಿರ್ಧಾರ ಮಾಡಿದೆ.

ಈ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಸರಾಸರಿ 20 ಕೇಂದ್ರಗಳ ಸ್ಥಾಪನೆಯೊಂದಿಗೆ ರಾಜ್ಯದಲ್ಲಿ 600 ಕಲಾವೃತ್ತ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಶಾಲಾ ವಿದ್ಯಾರ್ಥಿಗಳಲ್ಲಿ ಚಿತ್ರಕಲೆಯ ಅಭಿರುಚಿಯನ್ನು ಬೆಳೆಸಲು ಅಕಾಡೆಮಿ ಯೋಜನೆ ರೂಪಿಸಿದೆ.

ಪ್ರಾಯೋಗಿಕವಾಗಿ ಈ ಕಲಾವೃತ್ತ ಯೋಜನೆ ಸೇರಿದಂತೆ ಬೆಂಗಳೂರು, ಮಂಗಳೂರು, ಹಾಸನ ಹಾಗೂ ತುಮಕೂರಿನಲ್ಲಿ ಆರಂಭಿಸಲು ನಿರ್ಧಾರ ಮಾಡಲಾಗಿದೆ. ಹಂತ ಹಂತವಾಗಿ ರಾಜ್ಯದೆಲ್ಲೆಡೆ ಈ ಯೋಜನೆಯನ್ನು ವಿಸ್ತರಿಸುವ ಉದ್ದೇಶವಿದೆ.

ಕಲೆಯ ಪ್ರಕಾರಗಳಾದ ಸಂಗೀತ, ನೃತ್ಯ, ಸಾಹಿತ್ಯ ತನ್ನದೇ ಆದ ವ್ಯಾಪ್ತಿಯಲ್ಲಿ ಜನ ಸಾಮಾನ್ಯರದಲ್ಲಿ ಹಾಸು ಹೊಕ್ಕಾಗಿದೆ. ಆದರೆ, ಚಿತ್ರಕಲೆಯು ದೊಡ್ಡ ಮಟ್ಟದಲ್ಲಿ ಜನ ಸಾಮಾನ್ಯರೊಂದಿಗೆ ಹೆಚ್ಚು ಸಂಪರ್ಕವಿಲ್ಲದಂತಾಗಿದೆ.

ಈ ಚಿತ್ರಕಲೆಯ ಬಗ್ಗೆ ಸಾರ್ವಜನಿಕರಲ್ಲಿ ಆಸಕ್ತಿ ಇಲ್ಲದಿರುವುದರಿಂದ ಸೂಕ್ತ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಿದ್ದು, ಪ್ರತಿ ಜಿಲ್ಲೆಗಳಲ್ಲೂ ಕೇಂದ್ರಗಳನ್ನು ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ.

ಈ ಮೂಲಕ ಚಿತ್ರಕಲೆಯಲ್ಲಿ ಆಸಕ್ತಿ ಇರುವವರಿಗೆ ಒಂದು ವೇದಿಕೆಯೇ ಸೃಷ್ಟಿಯಾದಂತಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

10 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

10 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

10 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

10 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

10 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

10 hours ago