ಮೈಸೂರು: ಕದನ ವಿರಾಮ ಘೋಷಣೆಯಾದರೂ ಪಾಕ್ ತನ್ನ ನರಿ ಬುದ್ಧಿಯನ್ನು ಬಿಡದೇ ಭಾರತದ ಹಲವೆಡೆ ದಾಳಿ ಮಾಡಿರುವ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.
ಮೈಸೂರಿನ ಹಾರ್ಡಿಂಜ್ ವೃತ್ತದ ಬಳಿ ಭಾರತೀಯ ಸೈನಿಕರ ಕಟೌಟ್ಗೆ ಈಡುಗಾಯಿ ಹೊಡೆದು ಜೈಕಾರ ಹಾಕಿದ ವಾಟಾಳ್ ನಾಗರಾಜ್ ಅವರು, ಭಾರತೀಯ ಸೈನಿಕರಿಗೆ ಶುಭ ಕೋರಿದರು.
ಈ ವೇಳೆ ಮಾತನಾಡಿದ ಅವರು, ಪದೇ ಪದೇ ಕಾಲು ಕೆರೆದುಕೊಂಡು ಬರುವ ಪಾಪಿ ಪಾಕಿಸ್ತಾನಕ್ಕೆ ನಮ್ಮ ಸೈನಿಕರು ತಕ್ಕ ಉತ್ತರವನ್ನು ಕೊಡುತ್ತಿದ್ದಾರೆ. ಕದನ ವಿರಾಮಕ್ಕೆ ಅಮೇರಿಕಾ ಮಧ್ಯಸ್ಥಿಕೆ ವಹಿಸಿ ಶಾಂತಿ ನೆಲೆಸಲು ಪ್ರಯತ್ನ ಮಾಡಿದೆ. ಆದರೂ ಪಾಕಿಸ್ತಾನ ಮತ್ತೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ. ಪರಿಣಾಮ ಪಾಕಿಸ್ತಾನಕ್ಕೆ ನಮ್ಮ ಸೇನೆ ದಿಟ್ಟ ಪ್ರತ್ಯುತ್ತರ ಕೊಡುತ್ತಿದೆ. ಈ ಹಿನ್ನೆಲೆಯಲ್ಲಿ ನಮ್ಮ ಭಾರತೀಯ ಸೈನಿಕರಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಅಭಿನಂದಿಸುತ್ತೇನೆ ಎಂದು ಹೇಳಿದರು.
ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…
ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…
ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್ ನ್ಯೂಸ್ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…
ಕಲಬುರ್ಗಿ: ಟಾರ್ಚ್ ಹಿಡಿದು ಬಸ್ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಡ್ರೈವರ್ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…