ಮೈಸೂರು: ಕದನ ವಿರಾಮ ಘೋಷಣೆಯಾದರೂ ಪಾಕ್ ತನ್ನ ನರಿ ಬುದ್ಧಿಯನ್ನು ಬಿಡದೇ ಭಾರತದ ಹಲವೆಡೆ ದಾಳಿ ಮಾಡಿರುವ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.
ಮೈಸೂರಿನ ಹಾರ್ಡಿಂಜ್ ವೃತ್ತದ ಬಳಿ ಭಾರತೀಯ ಸೈನಿಕರ ಕಟೌಟ್ಗೆ ಈಡುಗಾಯಿ ಹೊಡೆದು ಜೈಕಾರ ಹಾಕಿದ ವಾಟಾಳ್ ನಾಗರಾಜ್ ಅವರು, ಭಾರತೀಯ ಸೈನಿಕರಿಗೆ ಶುಭ ಕೋರಿದರು.
ಈ ವೇಳೆ ಮಾತನಾಡಿದ ಅವರು, ಪದೇ ಪದೇ ಕಾಲು ಕೆರೆದುಕೊಂಡು ಬರುವ ಪಾಪಿ ಪಾಕಿಸ್ತಾನಕ್ಕೆ ನಮ್ಮ ಸೈನಿಕರು ತಕ್ಕ ಉತ್ತರವನ್ನು ಕೊಡುತ್ತಿದ್ದಾರೆ. ಕದನ ವಿರಾಮಕ್ಕೆ ಅಮೇರಿಕಾ ಮಧ್ಯಸ್ಥಿಕೆ ವಹಿಸಿ ಶಾಂತಿ ನೆಲೆಸಲು ಪ್ರಯತ್ನ ಮಾಡಿದೆ. ಆದರೂ ಪಾಕಿಸ್ತಾನ ಮತ್ತೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ. ಪರಿಣಾಮ ಪಾಕಿಸ್ತಾನಕ್ಕೆ ನಮ್ಮ ಸೇನೆ ದಿಟ್ಟ ಪ್ರತ್ಯುತ್ತರ ಕೊಡುತ್ತಿದೆ. ಈ ಹಿನ್ನೆಲೆಯಲ್ಲಿ ನಮ್ಮ ಭಾರತೀಯ ಸೈನಿಕರಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಅಭಿನಂದಿಸುತ್ತೇನೆ ಎಂದು ಹೇಳಿದರು.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…