ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ತನ್ನ ತಂದೆಯನ್ನು ಹೋಲಿಸಿ ಮಾತನಾಡಿರುವ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ನಾಲ್ವಡಿರವರ ಇತಿಹಾಸ ತಿಳಿಯದ ಯತೀಂದ್ರ ಸಿದ್ದರಾಮಯ್ಯ ಮಾತು ಕೇಳಿದರೆ ನಗು ಬರುತ್ತದೆ. ನಾಲ್ವಡಿ ಅವರಿಗಿಂತ ನಮ್ಮಪ್ಪನದೇ ಜಾಸ್ತಿ ಕೊಡುಗೆ ಮೈಸೂರಿಗೆ ಎಂದು ಹೇಳಿದ್ದಾರೆ. ಅವರಿಗೆ ಬಹುಶಃ ನಾಲ್ವಡಿರವರು ನಮ್ಮ ರಾಜ್ಯಕ್ಕೆ ನೀಡಿರುವ ನೂರಾರು ಕೊಡುಗೆಗಳು ತಿಳಿದಿಲ್ಲ. ಶಿಕ್ಷಣ, ನೀರಾವರಿ, ಕೈಗಾರಿಕೆ, ಕಾರ್ಖಾನೆಗಳು, ಪ್ರಜೆಗಳಿಗೆ ಸಾಮಾಜಿಕ ನ್ಯಾಯ ನೀಡಿ, ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ನಾಲ್ವಡಿರವರು ರಾಜ್ಯಕ್ಕೆ ನೀಡದ ಕೊಡುಗೆಗಳಿಲ್ಲ.
ನೂರಾರು ಜನ್ಮ ಎತ್ತಿದರೂ, ಯಾರೂ ನಾಲ್ವಡಿರವರ ಕಾಲಿನ ಧೂಳಿಗೂ ಸಮನಾಗಲ್ಲ. ಸಿದ್ದರಾಮಯ್ಯ ರಾಜಕೀಯದಲ್ಲಿ ಹಲವಾರು ಏಳು ಬೀಳುಗಳನ್ನು ಕಂಡು, ಪಕ್ಷಗಳನ್ನು ಬದಲಾವಣೆ ಮಾಡಿ, ರಾಜ್ಯದ ಜನರ ತೆರಿಗೆ ಹಣದಲ್ಲಿ ಐಷಾರಾಮಿ ಜೀವನ ನಡೆಸಿ, ಜನರ ಹಣದಲ್ಲಿ ಜನರಿಗೆ ಬಿಟ್ಟಿ ಭಾಗ್ಯಗಳನ್ನು ನೀಡುತ್ತಿದ್ದಾರೆಯೇ ಹೊರತು ಅವರ ಮನೆಯಿಂದ ಹಣವನ್ನು ತಂದು ರಾಜ್ಯವನ್ನು ಅಭಿವೃದ್ಧಿ ಮಾಡುತ್ತಿಲ್ಲ. ಮಹಾರಾಜರು ಕಟ್ಟಿಸಿದ ಮೈಸೂರು ಮೆಡಿಕಲ್ ಕಾಲೇಜು, ಕೆ.ಆರ್.ಆಸ್ಪತ್ರೆಗೆ ಸುಣ್ಣ ಬಣ್ಣವನ್ನು ಹೊಡಿಸಲು ಆಗಿಲ್ಲ.
ಕೇವಲ ತಮ್ಮ ರಾಜಕೀಯ ಪ್ರಚಾರಕ್ಕಾಗಿ, ಮನಬಂದಂತೆ ಹುಚ್ಚು ಹೇಳಿಕೆ ನೀಡುತ್ತಿರುವ ಯತೀಂದ್ರ ಸಿದ್ರಾಮಯ್ಯ ಈ ಕೂಡಲೇ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…