ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ತನ್ನ ತಂದೆಯನ್ನು ಹೋಲಿಸಿ ಮಾತನಾಡಿರುವ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ನಾಲ್ವಡಿರವರ ಇತಿಹಾಸ ತಿಳಿಯದ ಯತೀಂದ್ರ ಸಿದ್ದರಾಮಯ್ಯ ಮಾತು ಕೇಳಿದರೆ ನಗು ಬರುತ್ತದೆ. ನಾಲ್ವಡಿ ಅವರಿಗಿಂತ ನಮ್ಮಪ್ಪನದೇ ಜಾಸ್ತಿ ಕೊಡುಗೆ ಮೈಸೂರಿಗೆ ಎಂದು ಹೇಳಿದ್ದಾರೆ. ಅವರಿಗೆ ಬಹುಶಃ ನಾಲ್ವಡಿರವರು ನಮ್ಮ ರಾಜ್ಯಕ್ಕೆ ನೀಡಿರುವ ನೂರಾರು ಕೊಡುಗೆಗಳು ತಿಳಿದಿಲ್ಲ. ಶಿಕ್ಷಣ, ನೀರಾವರಿ, ಕೈಗಾರಿಕೆ, ಕಾರ್ಖಾನೆಗಳು, ಪ್ರಜೆಗಳಿಗೆ ಸಾಮಾಜಿಕ ನ್ಯಾಯ ನೀಡಿ, ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ನಾಲ್ವಡಿರವರು ರಾಜ್ಯಕ್ಕೆ ನೀಡದ ಕೊಡುಗೆಗಳಿಲ್ಲ.
ನೂರಾರು ಜನ್ಮ ಎತ್ತಿದರೂ, ಯಾರೂ ನಾಲ್ವಡಿರವರ ಕಾಲಿನ ಧೂಳಿಗೂ ಸಮನಾಗಲ್ಲ. ಸಿದ್ದರಾಮಯ್ಯ ರಾಜಕೀಯದಲ್ಲಿ ಹಲವಾರು ಏಳು ಬೀಳುಗಳನ್ನು ಕಂಡು, ಪಕ್ಷಗಳನ್ನು ಬದಲಾವಣೆ ಮಾಡಿ, ರಾಜ್ಯದ ಜನರ ತೆರಿಗೆ ಹಣದಲ್ಲಿ ಐಷಾರಾಮಿ ಜೀವನ ನಡೆಸಿ, ಜನರ ಹಣದಲ್ಲಿ ಜನರಿಗೆ ಬಿಟ್ಟಿ ಭಾಗ್ಯಗಳನ್ನು ನೀಡುತ್ತಿದ್ದಾರೆಯೇ ಹೊರತು ಅವರ ಮನೆಯಿಂದ ಹಣವನ್ನು ತಂದು ರಾಜ್ಯವನ್ನು ಅಭಿವೃದ್ಧಿ ಮಾಡುತ್ತಿಲ್ಲ. ಮಹಾರಾಜರು ಕಟ್ಟಿಸಿದ ಮೈಸೂರು ಮೆಡಿಕಲ್ ಕಾಲೇಜು, ಕೆ.ಆರ್.ಆಸ್ಪತ್ರೆಗೆ ಸುಣ್ಣ ಬಣ್ಣವನ್ನು ಹೊಡಿಸಲು ಆಗಿಲ್ಲ.
ಕೇವಲ ತಮ್ಮ ರಾಜಕೀಯ ಪ್ರಚಾರಕ್ಕಾಗಿ, ಮನಬಂದಂತೆ ಹುಚ್ಚು ಹೇಳಿಕೆ ನೀಡುತ್ತಿರುವ ಯತೀಂದ್ರ ಸಿದ್ರಾಮಯ್ಯ ಈ ಕೂಡಲೇ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿದರು.
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…
ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…
ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…