ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ತನ್ನ ತಂದೆಯನ್ನು ಹೋಲಿಸಿ ಮಾತನಾಡಿರುವ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ನಾಲ್ವಡಿರವರ ಇತಿಹಾಸ ತಿಳಿಯದ ಯತೀಂದ್ರ ಸಿದ್ದರಾಮಯ್ಯ ಮಾತು ಕೇಳಿದರೆ ನಗು ಬರುತ್ತದೆ. ನಾಲ್ವಡಿ ಅವರಿಗಿಂತ ನಮ್ಮಪ್ಪನದೇ ಜಾಸ್ತಿ ಕೊಡುಗೆ ಮೈಸೂರಿಗೆ ಎಂದು ಹೇಳಿದ್ದಾರೆ. ಅವರಿಗೆ ಬಹುಶಃ ನಾಲ್ವಡಿರವರು ನಮ್ಮ ರಾಜ್ಯಕ್ಕೆ ನೀಡಿರುವ ನೂರಾರು ಕೊಡುಗೆಗಳು ತಿಳಿದಿಲ್ಲ. ಶಿಕ್ಷಣ, ನೀರಾವರಿ, ಕೈಗಾರಿಕೆ, ಕಾರ್ಖಾನೆಗಳು, ಪ್ರಜೆಗಳಿಗೆ ಸಾಮಾಜಿಕ ನ್ಯಾಯ ನೀಡಿ, ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ನಾಲ್ವಡಿರವರು ರಾಜ್ಯಕ್ಕೆ ನೀಡದ ಕೊಡುಗೆಗಳಿಲ್ಲ.
ನೂರಾರು ಜನ್ಮ ಎತ್ತಿದರೂ, ಯಾರೂ ನಾಲ್ವಡಿರವರ ಕಾಲಿನ ಧೂಳಿಗೂ ಸಮನಾಗಲ್ಲ. ಸಿದ್ದರಾಮಯ್ಯ ರಾಜಕೀಯದಲ್ಲಿ ಹಲವಾರು ಏಳು ಬೀಳುಗಳನ್ನು ಕಂಡು, ಪಕ್ಷಗಳನ್ನು ಬದಲಾವಣೆ ಮಾಡಿ, ರಾಜ್ಯದ ಜನರ ತೆರಿಗೆ ಹಣದಲ್ಲಿ ಐಷಾರಾಮಿ ಜೀವನ ನಡೆಸಿ, ಜನರ ಹಣದಲ್ಲಿ ಜನರಿಗೆ ಬಿಟ್ಟಿ ಭಾಗ್ಯಗಳನ್ನು ನೀಡುತ್ತಿದ್ದಾರೆಯೇ ಹೊರತು ಅವರ ಮನೆಯಿಂದ ಹಣವನ್ನು ತಂದು ರಾಜ್ಯವನ್ನು ಅಭಿವೃದ್ಧಿ ಮಾಡುತ್ತಿಲ್ಲ. ಮಹಾರಾಜರು ಕಟ್ಟಿಸಿದ ಮೈಸೂರು ಮೆಡಿಕಲ್ ಕಾಲೇಜು, ಕೆ.ಆರ್.ಆಸ್ಪತ್ರೆಗೆ ಸುಣ್ಣ ಬಣ್ಣವನ್ನು ಹೊಡಿಸಲು ಆಗಿಲ್ಲ.
ಕೇವಲ ತಮ್ಮ ರಾಜಕೀಯ ಪ್ರಚಾರಕ್ಕಾಗಿ, ಮನಬಂದಂತೆ ಹುಚ್ಚು ಹೇಳಿಕೆ ನೀಡುತ್ತಿರುವ ಯತೀಂದ್ರ ಸಿದ್ರಾಮಯ್ಯ ಈ ಕೂಡಲೇ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿದರು.
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…