ಮೈಸೂರು ನಗರ

ಕನ್ನಡಗರು ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಬಾರದು : ಪ್ರೊ.ಎನ್.ಎಂ.ತಳವಾರ್‌ ಸಲಹೆ

ಮೈಸೂರು : ಕನ್ನಡಿಗರಾದ ನಾವು ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಬಾರದು ಎಂದು ಕನ್ನಡ ಶಾಸ್ತ್ರೀಯ ಭಾಷೆ ಅತ್ಯುನ್ನತ ಕೇಂದ್ರದ ಯೋಜನಾ ನಿರ್ದೇಶಕ ಪ್ರೊ.ಎನ್.ಎಂ.ತಳವಾರ್ ಹೇಳಿದರು.

ನಗರದ ಖಿಲ್ಲೆ ಮೊಹಲ್ಲಾದ ಶ್ರೀ ನಟರಾಜ ಪ್ರತಿಷ್ಠಾನದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ೭೦ನೇ ಕನ್ನಡ ರಾಜ್ಯೋತ್ಸವದಲ್ಲಿ ಪ್ರದಾನ ಭಾಷಣ ಮಾಡಿದ ಅವರು, ಕನ್ನಡ ಭಾಷೆಯು ಆಯಾಯ ಕಾಲಘಟ್ಟದಲ್ಲಿ ಸಂಸ್ಕೃತ, ಪ್ರಾಕೃತ, ಹಿಂದಿ ಭಾಷೆಗಳಿಗೆ ಒಳಗಾಗಿದ್ದರೂ ತನ್ನದೇ ಆದ ಅಸ್ಮಿತೆಯನ್ನು ಉಳಿಸಿಕೊಂಡು ಬಂದಿದೆ. ಈಗ ಇಂಗ್ಲಿಷ್ ಭಾಷೆಯ ಪ್ರಭಾವಕ್ಕೆ ಒಳಗಾಗಿದೆ ಎಂದರು.

ಇಂಗ್ಲಿಷ್ ಭಾಷೆ ಅಂಬೆಗಾಲಿಡುವಾಗಲೇ ಕನ್ನಡ ಭಾಷೆ ಪ್ರಬುದ್ಧವಾಗಿತ್ತು. ಬಿ.ಎಂ.ಶ್ರೀಕಂಠಯ್ಯನವರು ಒಂದು ಕೈಯಲ್ಲಿ ಕುಮಾರವ್ಯಾಸನ ಕೃತಿಯನ್ನು, ಮತ್ತೊಂದು ಕೈಯಲ್ಲಿ ಪಂಪನ ಕೃತಿಯನ್ನು ಹಿಡಿದುಕೊಂಡು ಪ್ರಪಂಚವನ್ನು ಸುತ್ತಿಕೊಂಡು ಬರುತ್ತೇನೆ ಎಂದು ಇಂಗ್ಲಿಷ್ ಬರುವ ಮೊದಲೇ ಅಭಿಮಾನದಿಂದ ನುಡಿದಿದ್ದರು. ಕನ್ನಡಿಗರಾದ ನಾವು ಬೇರೆ ಭಾಷೆಯ ಪ್ರಭಾವಕ್ಕೆ ಒಳಗಾಗದೇ ಅನ್ಯ ಭಾಷಿಕರಿಗೆ ಕನ್ನಡ ಕಲಿಸುವುದರ ಜೊತೆಗೆ ನೆರೆ-ಹೊರೆಯವರೊಂದಿಗೆ ಸೌಹಾರ್ದದಿಂದ ಬದುಕಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಪತ್ರಕರ್ತ ಎಂ.ಆರ್. ಸತ್ಯನಾರಾಯಣ ಮಾತನಾಡಿ, ನಮ್ಮ ನಾಲಿಗೆಯ ಭಾಷೆ ಮತ್ತು ತನು -ಮನದ ಭಾಷೆ ಕನ್ನಡ. ಕನ್ನಡ ಭಾಷೆಗೆ ಹೃದಯವನ್ನು ಕಂಪಿಸುವ ಮತ್ತು ಕಿವಿಯನ್ನು ನಿಮಿರಿಸುವ ಶಕ್ತಿ ಇದೆ ಎಂದರು.

ಇದನ್ನೂ ಓದಿ:-ಹುಲಿ ಓಡಾಡುವ ನಕಲಿ (AI) ವಿಡಿಯೋ : ಕ್ರಮ ಮುಂದಾದ ಅರಣ್ಯ ಇಲಾಖೆ

ಸನ್ಮಾನ ಸ್ವೀಕರಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲೇ ಕನ್ನಡಿಗರು ಒಂದಾಗಬೇಕು ಎಂಬ ಪರಿಕಲ್ಪನೆಯಲ್ಲಿ ನಮ್ಮ ಕವಿಗಳಾದ ಹುಯಿಲಗೋಳ ನಾರಾಯಣರಾವ್, ಕುವೆಂಪು ಮತ್ತು ಡಿ.ಎಸ್.ಕರ್ಕಿಯವರು ಕನ್ನಡದ ಗೀತೆಗಳನ್ನು ರಚಿಸಿದ್ದಾರೆ. ಭಾಷಾವಾರು ಪ್ರಾಂತ್ಯ ರಚನೆಯಾದ ಮೇಲೆ ಕನ್ನಡಿಗರ ಹೋರಾಟದ ಫಲವಾಗಿ ಕನ್ನಡ ರಾಜ್ಯ ಉದಯವಾಯಿತು ಎಂದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ನಟರಾಜ ಪ್ರತಿಷ್ಠಾನದ ವಿಶೇಷಾಽಕಾರಿ ಪ್ರೊ.ಎಸ್.ಶಿವರಾಜಪ್ಪ, ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಗೌರಿಶಂಕರ ನಂದಿಧ್ವಜ ಸಂಘದ ಅಧ್ಯಕ್ಷ ಉಡಿಗಾಲ ಮಹದೇವಪ್ಪ ಮಾತನಾಡಿದರು. ಇದಕ್ಕೂ ಮುನ್ನ ಶ್ರೀ ನಟರಾಜ ಪ್ರತಿಷ್ಠಾನದ ವತಿಯಿಂದ ಏರ್ಪಡಿಸಿದ್ದ ಕನ್ನಡ ಅರಿವು ಜಾಥಾಕ್ಕೆ ಕೃಷ್ಣರಾಜ ಉಪ ವಿಭಾಗದ ಎಸಿಪಿ ಎಚ್.ಬಿ.ರಮೇಶ್ ಕುಮಾರ್ ಚಾಲನೆ ನೀಡಿದರು.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಾಲಾ-ಕಾಲೇಜುಗಳ ಹಂತದಲ್ಲಿ ನಡೆದ ಚರ್ಚಾಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ನಡೆದ ಕನಕ ಓದು-ವ್ಯಾಖ್ಯಾನ-ಗಾಯನ-ರಸಪ್ರಶ್ನೆ ಕುರಿತ ಪ್ರತಿಭಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲಾಯಿತು.

ಶ್ರೀ ನಟರಾಜ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಪ್ರಾಂಶುಪಾಲರಾದ ವಿ.ಡಿ.ಸುನೀತಾರಾಣಿ, ಶ್ರೀ ನಟರಾಜ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಎಂ.ಆರ್.ಪವಿತ್ರಾ, ಪ್ರೌಢಶಾಲೆ ಮುಖ್ಯ ಶಿಕ್ಷಕಿ ಎಚ್.ಜಿ.ಮಮತಾ, ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ವಿದ್ಯಾರ್ಥಿಗಳು ಹಾಜರಿದ್ದರು. ನಂತರದಲ್ಲಿ ಸಂಸ್ಥೆಯ ಎಲ್ಲಾ ವಿಭಾಗದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಆಂದೋಲನ ಡೆಸ್ಕ್

Recent Posts

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

11 mins ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

40 mins ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

5 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

5 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

5 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

6 hours ago