ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು
ಕೆ.ಆರ್.ನಗರ: ನಾಡಿನ ಸುಪ್ರಸಿದ್ಧ ಶ್ರೀ ಕಪ್ಪಡಿ ಜಾತ್ರೆಯಲ್ಲಿ ೨ನೇ ಬಾರಿ ೨೦ ಜೊತೆ ನಾಡಕುಸ್ತಿ ಪಂದ್ಯಾವಳಿಗೆ ಶ್ರೀ ಕ್ಷೇತ್ರ ಕಪ್ಪಡಿ ಮಠಾಧಿಪತಿಗಳಾದ ಪರಮಪೂಜ್ಯ ಎಂ.ಎಲ್. ವರ್ಚಸ್ವಿ ಶ್ರೀಕಂಠ ಸಿದ್ದಲಿಂಗರಾಜೇ ಅರಸ್ ಸ್ವಾಮೀಜಿ ಅವರು ಚಾಲನೆ ನೀಡಿದರು
ಬಳಿಕ ಮಾತನಾಡಿದ ಸ್ವಾಮೀಜಿ ಅವರು, ಕುಸ್ತಿ ಎಂಬುದು ಕೇವಲ ಕ್ರೀಡೆಯಲ್ಲ. ಅದು ನಮ್ಮ ಸಂಸ್ಕೃತಿ, ಪರಂಪರೆಯ ಭಾಗವಾಗಿದ್ದು, ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ದೃಢತೆಗೆ ಪ್ರೇರಣೆಯಾಗುತ್ತದೆ. ಶಿಸ್ತು, ಸಾಹಸ ಮತ್ತು ಆತ್ಮವಿಶ್ವಾಸವನ್ನು ಬೆಳೆಸುತ್ತದೆ. ಗ್ರಾಮೀಣ ಕ್ರೀಡೆ ಮತ್ತು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕುಸ್ತಿ ಆಯೋಜಿಸಲಾಗುತ್ತಿದೆ. ಸ್ಥಳೀಯ ಕುಸ್ತಿಪಟುಗಳಲ್ಲದೇ ಹೊರ ರಾಜ್ಯಗಳಿಂದಲೂ ಆಟಗಾರರು ಆಗಮಿಸುತ್ತಿರುವುದು ಸಂತೋಷ ತಂದಿದೆ ಎಂದರು.
ಕುಸ್ತಿ ಪಂದ್ಯಾವಳಿ ಪ್ರೇಕ್ಷಕರಿಗೆ ರಸದೌತಣ ನೀಡಿದವು. ಸಿಳ್ಳೆ, ಚಪ್ಪಾಳೆಗಳ ಮೂಲಕ ಕುಸ್ತಿ ಪಟುಗಳಿಗೆ ಪ್ರೋತ್ಸಾಹ ದೊರೆಯಿತು.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…