ಮೈಸೂರು ನಗರ

ಆಕಾಶ, ಭೂಮಿ ಒಂದಾದರೂ ಸರಿ ಮಾರ್ಚ್.‌22ಕ್ಕೆ ಕರ್ನಾಟಕ ಬಂದ್‌ ಆಗೇ ಆಗುತ್ತದೆ: ವಾಟಾಳ್‌ ನಾಗರಾಜ್‌

ಮೈಸೂರು: ಆಕಾಶ, ಭೂಮಿ ಒಂದಾದರೂ ಸರಿ ಮಾರ್ಚ್.22ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಅನ್ನು ಮಾಡೇ ಮಾಡಲಾಗುತ್ತದೆ ಎಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಬೆಳಗಾವಿ ಗಡಿಯಲ್ಲಿ ಎಂಇಎಸ್ ಕಾರ್ಯಕರ್ತರ ದೌರ್ಜನ್ಯ ಖಂಡಿಸಿ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ನಾಡು, ಕನ್ನಡ ಹಾಗೂ ಕನ್ನಡಿಗರ ಶಕ್ತಿಯು ಅಖಂಡ ಕರ್ನಾಟಕವನ್ನು ಬಂದ್ ಮಾಡುವ ಮೂಲಕ ಪ್ರದರ್ಶನವಾಗಬೇಕು. ಕನ್ನಡಿಗರ ಶಕ್ತಿ ದೇಶಕ್ಕೆ ಗೊತ್ತಾಗಬೇಕು ಎಂದರೆ ಮಾ.22ರಂದು ಕರ್ನಾಟಕ ಸಂಪೂರ್ಣ ಬಂದ್ ಆಗಬೇಕು ಎಂದು ಒತ್ತಾಯಿಸಿದರು.

ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳು ಅಭಿವೃದ್ಧಿಯಾಗಬೇಕಾಗಿದೆ. ಕೇಂದ್ರ ಸರ್ಕಾರವು ರಾಜ್ಯವನ್ನು ಕಡೆಗಣಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಎಂದೆಂದೂ ಕಂಡಿರದ ಬಂದ್ ಆಗಬೇಕು. ಈಗಾಗಲೇ ೧೯೦೦ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಈ ಬಂದ್ ಕನ್ನಡಿಗರಿಗಾಗಿ ನಡೆಯುತ್ತಿರುವ ಬಂದ್ ಎಂದರು.

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಕೂಡ ಕೊನೆ ಕ್ಷಣದಲ್ಲಿ ಬೆಂಬಲ ಸೂಚಿಸುತ್ತಾರೆ. ನಾರಾಯಣಗೌಡರ ಬಗ್ಗೆ ನಮಗೆ ಗೌರವ ಇದೆ. ಅವರ ಜೊತೆಯೂ ಕೂಡ ಮಾತನಾಡುತ್ತೇವೆ. ಬಂದ್‌ಗೆ ಯಾರು ಕೂಡ ವಿರೋಧ ಮಾಡುವುದಿಲ್ಲ ಎಂದು ವಾಟಾಳ್ ವಿಶ್ವಾಸ ವ್ಯಕ್ತಪಡಿಸಿದರು.

ಕೆಲವರು ಬಂದ್ ಬಗ್ಗೆ ವ್ಯತಿರಿಕ್ತವಾಗಿ ಮಾತನಾಡುತ್ತಾರೆ. ಅವರು ಅವಿವೇಕಿಗಳು. ಕನ್ನಡಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡುವ ಭಾವನೆ ಇರಬೇಕು. ವಿದ್ಯಾರ್ಥಿಗಳು ಎಲ್ಲಾ ತ್ಯಾಗಕ್ಕೂ ಸಿದ್ಧರಾಗಬೇಕು ಎಂದರು.

ಎಂಇಎಸ್ ದೌರ್ಜನ್ಯ ಖಂಡಿಸಿ ಹಾಗೂ ಸಾರಿಗೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ಬೆಂಗಳೂರಿನಲ್ಲಿ ರಾಜಭವನ ಮುತ್ತಿಗೆ ಹಾಕುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

4 mins ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

36 mins ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

47 mins ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

2 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

3 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

3 hours ago