ಮೈಸೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ ಶುರುವಾದ ಸಮರ ಈಗ ಕರ್ನಾಟಕ ಬಂದ್ವರೆಗೂ ಬಂದಿದ್ದು, ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ಗೆ ಮೈಸೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಹುತೇಕ ಸಂಘಟನೆಗಳು ನೈತಿಕ ಬೆಂಬಲ ಘೋಷಿಸಿದ್ದವು. ಹೋಟೆಲ್ ಮಾಲೀಕರ ಸಂಘ, ಖಾಸಗಿ ಬಸ್ ಮಾಲೀಕರ ಸಂಘ, ಮೈಸೂರು ಜಿಲ್ಲಾ ವಕೀಲರ ಸಂಘ ಸೇರಿದಂತೆ ಹಲವು ಸಂಘಟನೆಗಳು ನೈತಿಕ ಬೆಂಬಲ ಘೋಷಿಸಿದ್ದವು.
ಆದರೆ ಇಂದಿನ ಬಂದ್ ಸಂಪೂರ್ಣ ವಿಫಲವಾಗಿದ್ದು, ಸಾರಿಗೆ ಬಸ್ಗಳು ಎಂದಿನಂತೆ ಸಂಚಾರ ಮಾಡುತ್ತಿವೆ. ಬೆಳಿಗ್ಗೆ 7 ಗಂಟೆಗೆ ಕನ್ನಡ ಪರ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ಬಿಟ್ಟರೆ, ಬೇರೆ ಎಲ್ಲೂ ಕೂಡ ಬಂದ್ ಇದೆ ಎಂಬುದೇ ಜನರಿಗೆ ಕಾಣುತ್ತಿಲ್ಲ.
ಬೆಳಿಗ್ಗೆ 8 ಗಂಟೆಯ ಮೇಲೆ ಮೈಸೂರು ಸಹಜ ಸ್ಥಿತಿಗೆ ಮರಳಿದ್ದು, ಎಂದಿನಂತೆ ಜನಸಂಚಾರ ಹಾಗೂ ಎಲ್ಲಾ ಕಡೆ ವಾಹನಗಳು ಸಂಚರಿಸುತ್ತಿವೆ.
ಇನ್ನು ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಬಲವಂತವಾಗಿ ಬಂದ್ ಮಾಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ.
ಒಟ್ಟಾರೆಯಾಗಿ ಇಂದಿನ ಬಂದ್ ಸಂಪೂರ್ಣ ವಿಫಲವಾಗಿದ್ದು, ಬರೀ ಪ್ರತಿಭಟನೆಗೆ ಸೀಮಿತವಾಗಿದೆ.
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…