ಮೈಸೂರು: ಇದೇ ನವೆಂಬರ್.20ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೌದಿ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕದಂಬ ರಂಗ ವೇದಿಕೆ ಅಧ್ಯಕ್ಷ ರಾಜಶೇಖರ ಕದಂಬ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪತ್ರಕರ್ತ, ಲೇಖಕ ಗಣೇಶ ಅಮೀನಗಡ ಅವರ ಬಂಗಾರದ ಮನುಷ್ಯ ನಾಟಕದ ಕೃತಿ ಬಿಡುಗಡೆ ಹಾಗೂ ಅವರ ರಚನೆಯ ಕೌದಿ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ನವೆಂಬರ್.20ರಂದು ಸಂಜೆ 6.30ಕ್ಕೆ ನಗರದ ಕಲಾಮಂದಿರದ ಪಕ್ಕದ ಕಿರು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಇದನ್ನು ಓದಿ: ಆನ್ಲೈನ್ ಗೇಮಿಂಗ್ ಕಂಪನಿಗಳ ಮೇಲೆ ಇಡಿ ದಾಳಿ
ಟಿ.ಕೆ.ರಾಮರಾವ್ ಅವರ ಕಾದಂಬರಿ ಆಧರಿಸಿ ಬಂಗಾರದ ಮನುಷ್ಯ ನಾಟಕವಾಗಿ ಗಣೇಶ ಅಮೀನಗಡ ರಚಿಸಿದ್ದಾರೆ. ಇದನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಬಿಡುಗಡೆಗೊಳಿಸಲಿದ್ದಾರೆ. ಕೃತಿಯನ್ನು ಲೇಖಕ ಡಾ.ಎನ್.ಎಂ.ಗಿರಿಜಾಪತಿ ಪರಿಚಯಿಸುವರು ಎಂದು ಹೇಳಿದರು.
ಪುಸ್ತಕ ಬಿಡುಗಡೆ ನಂತರ ಕೌದಿ ನಾಟಕ ಪ್ರದರ್ಶನಗೊಳ್ಳಲಿದೆ. ಮೈಸೂರಿನಲ್ಲಿ ಮೊದಲ ಬಾರಿಗೆ ನಾಟಕ ಪ್ರದರ್ಶನಗೊಳ್ಳಲಿದೆ. ಒಂದು ಗಂಟೆ ಅವಧಿಯ ಈ ನಾಟಕವನ್ನು ಕಲಬುರ್ಗಿಯ ಭಾಗ್ಯಶ್ರೀ ಪಾಳಾ ಪ್ರಸ್ತುಪಡಿಸುವರು. ಇದರ ವಿನ್ಯಾಸ, ಸಂಗೀತ ಹಾಗೂ ನಿರ್ದೇಶನ ಜಗದೀಶ್ ಆರ್.ಜಾಣಿ ಅವರದು ಎಂದು ವಿವರಣೆ ನೀಡಿದರು.





