ಮೈಸೂರು ನಗರ

ನವೆಂಬರ್.‌20ರಂದು ಮೈಸೂರಿನಲ್ಲಿ ಕೌದಿ ನಾಟಕ ಪ್ರದರ್ಶನ

ಮೈಸೂರು: ಇದೇ ನವೆಂಬರ್.‌20ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೌದಿ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕದಂಬ ರಂಗ ವೇದಿಕೆ ಅಧ್ಯಕ್ಷ ರಾಜಶೇಖರ ಕದಂಬ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪತ್ರಕರ್ತ, ಲೇಖಕ ಗಣೇಶ ಅಮೀನಗಡ ಅವರ ಬಂಗಾರದ ಮನುಷ್ಯ ನಾಟಕದ ಕೃತಿ ಬಿಡುಗಡೆ ಹಾಗೂ ಅವರ ರಚನೆಯ ಕೌದಿ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ನವೆಂಬರ್.‌20ರಂದು ಸಂಜೆ 6.30ಕ್ಕೆ ನಗರದ ಕಲಾಮಂದಿರದ ಪಕ್ಕದ ಕಿರು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಇದನ್ನು ಓದಿ: ಆನ್‌ಲೈನ್‌ ಗೇಮಿಂಗ್‌ ಕಂಪನಿಗಳ ಮೇಲೆ ಇಡಿ ದಾಳಿ

ಟಿ.ಕೆ.ರಾಮರಾವ್‌ ಅವರ ಕಾದಂಬರಿ ಆಧರಿಸಿ ಬಂಗಾರದ ಮನುಷ್ಯ ನಾಟಕವಾಗಿ ಗಣೇಶ ಅಮೀನಗಡ ರಚಿಸಿದ್ದಾರೆ. ಇದನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಬಿಡುಗಡೆಗೊಳಿಸಲಿದ್ದಾರೆ. ಕೃತಿಯನ್ನು ಲೇಖಕ ಡಾ.ಎನ್.ಎಂ.ಗಿರಿಜಾಪತಿ ಪರಿಚಯಿಸುವರು ಎಂದು ಹೇಳಿದರು.

ಪುಸ್ತಕ ಬಿಡುಗಡೆ ನಂತರ ಕೌದಿ ನಾಟಕ ಪ್ರದರ್ಶನಗೊಳ್ಳಲಿದೆ. ಮೈಸೂರಿನಲ್ಲಿ ಮೊದಲ ಬಾರಿಗೆ ನಾಟಕ ಪ್ರದರ್ಶನಗೊಳ್ಳಲಿದೆ. ಒಂದು ಗಂಟೆ ಅವಧಿಯ ಈ ನಾಟಕವನ್ನು ಕಲಬುರ್ಗಿಯ ಭಾಗ್ಯಶ್ರೀ ಪಾಳಾ ಪ್ರಸ್ತುಪಡಿಸುವರು. ಇದರ ವಿನ್ಯಾಸ, ಸಂಗೀತ ಹಾಗೂ ನಿರ್ದೇಶನ ಜಗದೀಶ್‌ ಆರ್‌.ಜಾಣಿ ಅವರದು ಎಂದು ವಿವರಣೆ ನೀಡಿದರು.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

6 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

6 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

7 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

8 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

8 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

8 hours ago