ಮೈಸೂರು ನಗರ

ನವೆಂಬರ್.‌20ರಂದು ಮೈಸೂರಿನಲ್ಲಿ ಕೌದಿ ನಾಟಕ ಪ್ರದರ್ಶನ

ಮೈಸೂರು: ಇದೇ ನವೆಂಬರ್.‌20ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೌದಿ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕದಂಬ ರಂಗ ವೇದಿಕೆ ಅಧ್ಯಕ್ಷ ರಾಜಶೇಖರ ಕದಂಬ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪತ್ರಕರ್ತ, ಲೇಖಕ ಗಣೇಶ ಅಮೀನಗಡ ಅವರ ಬಂಗಾರದ ಮನುಷ್ಯ ನಾಟಕದ ಕೃತಿ ಬಿಡುಗಡೆ ಹಾಗೂ ಅವರ ರಚನೆಯ ಕೌದಿ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ನವೆಂಬರ್.‌20ರಂದು ಸಂಜೆ 6.30ಕ್ಕೆ ನಗರದ ಕಲಾಮಂದಿರದ ಪಕ್ಕದ ಕಿರು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಇದನ್ನು ಓದಿ: ಆನ್‌ಲೈನ್‌ ಗೇಮಿಂಗ್‌ ಕಂಪನಿಗಳ ಮೇಲೆ ಇಡಿ ದಾಳಿ

ಟಿ.ಕೆ.ರಾಮರಾವ್‌ ಅವರ ಕಾದಂಬರಿ ಆಧರಿಸಿ ಬಂಗಾರದ ಮನುಷ್ಯ ನಾಟಕವಾಗಿ ಗಣೇಶ ಅಮೀನಗಡ ರಚಿಸಿದ್ದಾರೆ. ಇದನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಬಿಡುಗಡೆಗೊಳಿಸಲಿದ್ದಾರೆ. ಕೃತಿಯನ್ನು ಲೇಖಕ ಡಾ.ಎನ್.ಎಂ.ಗಿರಿಜಾಪತಿ ಪರಿಚಯಿಸುವರು ಎಂದು ಹೇಳಿದರು.

ಪುಸ್ತಕ ಬಿಡುಗಡೆ ನಂತರ ಕೌದಿ ನಾಟಕ ಪ್ರದರ್ಶನಗೊಳ್ಳಲಿದೆ. ಮೈಸೂರಿನಲ್ಲಿ ಮೊದಲ ಬಾರಿಗೆ ನಾಟಕ ಪ್ರದರ್ಶನಗೊಳ್ಳಲಿದೆ. ಒಂದು ಗಂಟೆ ಅವಧಿಯ ಈ ನಾಟಕವನ್ನು ಕಲಬುರ್ಗಿಯ ಭಾಗ್ಯಶ್ರೀ ಪಾಳಾ ಪ್ರಸ್ತುಪಡಿಸುವರು. ಇದರ ವಿನ್ಯಾಸ, ಸಂಗೀತ ಹಾಗೂ ನಿರ್ದೇಶನ ಜಗದೀಶ್‌ ಆರ್‌.ಜಾಣಿ ಅವರದು ಎಂದು ವಿವರಣೆ ನೀಡಿದರು.

ಆಂದೋಲನ ಡೆಸ್ಕ್

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

6 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

8 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

8 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

8 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

9 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

9 hours ago