ಮೈಸೂರು ನಗರ

ಕೆಡಿಪಿ: ಮಧ್ಯಾಹ್ನದಿಂದ ರಾತ್ರಿವರೆಗೂ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ತವರಿನಲ್ಲಿ ಶುಕ್ರವಾರ(ಸೆ.27) ಮಧ್ಯಾಹ್ನದಿಂದ ರಾತ್ರಿ 9:35ರವರೆಗೂ ಕೆಡಿಪಿ ಸಭೆ ನಡೆಸಿ, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.

ನಾನು ಮೈಸೂರಿಗೆ ಬಂದಾಗಲೆಲ್ಲಾ ಜನ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರ್ತಾರೆ. ಇದರ ಅರ್ಥ ಏನು? ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದ್ದರೆ ಆ ಜನ ನನ್ನ ಬಳಿಗೆ ನೂರಾರು ಸಂಖ್ಯೆಯಲ್ಲಿ ಏಕೆ ಬರುತ್ತಿದ್ದರು ಎಂದು ಸಿಎಂ ಖಾರವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಪ್ರಶ್ನಿಸಿದರು.

ಅಧಿಕಾರಿಗಳು ಸಮರ್ಪಕವಾಗಿ ಸಮಸ್ಯೆಗಳನ್ನು ಅಟೆಂಡ್ ಮಾಡಿದ್ದರೆ ಜನರೇಕೆ ನನ್ನ ಬಳಿಗೆ ಬರುತ್ತಿದ್ದರು ಎಂದು ಸಿಎಂ ಮರು ಪ್ರಶ್ನಿಸಿದರು.

ಅಧಿಕಾರಿಗಳು ಆಸ್ಪತ್ರೆ, ಹಾಸ್ಟೆಲ್, ಬಾರ್ ಗಳು ಇನ್ನಿತರೆ ಸ್ಥಳಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವುದನ್ನು ನಿಲ್ಲಿಸಿಬಿಟ್ಟಿದ್ದೀರಿ. ಹೀಗಾಗಿ ಭಯ ಇಲ್ಲವಾಗಿದೆ. ದಿಡೀರ್ ಭೇಟಿ ನೀಡಿ ಗುಣಮಟ್ಟವನ್ನು ಪರಿಶೀಲಿಸಬೇಕು, ನಿಯಮ ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂದು ಸೂಚಿಸಿದರು.

ನನ್ನ ಜಿಲ್ಲೆ ಮಾದರಿಯಾಗಿರಬೇಕು
ಮೈಸೂರು ನನ್ನ ಜಿಲ್ಲೆ. ಈ ಜಿಲ್ಲೆ ಮಾದರಿಯಾಗಿ ಇರಬೇಕು. ಉಳಿದ ಜಿಲ್ಲೆಗಳಿಗೆ ಮಾದರಿ ಆಗಬೇಕು. ಈ ಜವಾಬ್ದಾರಿನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ತೆಗೆದುಕೊಳ್ಳಬೇಕು. ತುಂಬ ವರ್ಷಗಳಿಂದ ಬಾಕಿ ಇರುವ ಫೈಲ್ಗಳನ್ನು ಪರಿಶೀಲಿಸಬೇಕು, ಏಕೆ ಕ್ಲಿಯರ್ ಮಾಡುತ್ತಿಲ್ಲ? ಐದು, ನಾಲ್ಕು, ಮೂರು ವರ್ಷಗಳಿಂದ ಫೈಲ್ಗಳು ಏಕೆ ಬಾಕಿ ಉಳಿದಿವೆ. ನೀವೇಕೆ ಇತ್ಯರ್ಥ ಮಾಡುತ್ತಿಲ್ಲ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.

ವಿಭಾಗೀಯ ಅಧಿಕಾರಿಗಳು ಚುರುಕಾಗಿದ್ದರೆ ಜಿಲ್ಲಾ ಮಟ್ಟದ ಅಧಿಕಾರಿಗಳೂ ಅಲರ್ಟ್ ಆಗಿರುತ್ತಾರೆ. ಕಚೇರಿ ಬಾಗಿಲಿಗೆ ರೈತರನ್ನು ಲಘುವಾಗಿ ನೋಡುವುದನ್ನು ನಾನು ಸಹಿಸಲ್ಲ. ಬಹಳ ಮಂದಿ ಅಧಿಕಾರಿಗಳು ಕಚೇರಿಯಲ್ಲೇ ಇರುವುದಿಲ್ಲ ಎನ್ನುವ ದೂರುಗಳು ಬರುತ್ತಿವೆ. ಪಿಡಿಒ ಗಳು ತಾಲ್ಲೂಕು ಕೇಂದ್ರದಲ್ಲೂ ಇರುವುದಿಲ್ಲ ಎನ್ನುವ ದೂರುಗಳು ನನಗೆ ಬರುತ್ತಿವೆ. ವೈದ್ಯರು ಕರ್ತವ್ಯದ ಸ್ಥಳದಲ್ಲಿ ನೆಲೆಸುತ್ತಿಲ್ಲ. ದೂರದ ಊರಿಂದ ಓಡಾಡುತ್ತಿದ್ದಾರೆ. ಇದನ್ನು ಸಹಿಸಬೇಕಾ ಎಂದು ಪ್ರಶ್ನಿಸಿದರು.

ನಿಮ್ಮ ಹೊಣೆಗಾರಿಕೆಗಳನ್ನು ನೀವು ಸೂಕ್ತವಾಗಿ ನಿರ್ವಹಿಸಿದರೆ, ಆ ಸಮಸ್ಯೆಗಳನ್ನು ಬಗೆಹರಿಸುವುದು ಕಷ್ಟವೇನಲ್ಲ. ಆದ್ದರಿಂದ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ. ಜನರ ಸಮಸ್ಯೆಗಳನ್ನು ಪರಿಹರಿಸಿ ಎಂದರು.

ನಿಮ್ಮ ಹಂತದಲ್ಲೇ ಬಗೆಹರಿಯುವ ಸಮಸ್ಯೆಗಳನ್ನು ಉದಾಸೀನ ಮಾಡದೆ ಬಗೆಹರಿಸಿ. ಜನ ನನ್ನ ಬಳಿಗೆ ಬರುತ್ತಿದ್ದಾರೆ ಎಂದರೆ ನಿಮ್ಮ ಹಂತದಲ್ಲಿ ಕೆಲಸಗಳು ಆಗುತ್ತಿಲ್ಲ ಅಂತಲೇ ಅರ್ಥ. ನೀವುಗಳು ಜನಗಳ ಪರವಾಗಿ ಇಲ್ಲ ಎನ್ನುವ ಅರ್ಥ ಬರುತ್ತದೆ. ನಿಮ್ಮ ನಿಮ್ಮ ಕೆಲಸವನ್ನು ಗಂಭೀರವಾಗಿ ಪರಿಗಣಿಸಿ ನಿರ್ವಹಿಸಿ ಎಂದು ತಾಕೀತು ಮಾಡಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

1 hour ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

2 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

3 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

3 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

4 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

4 hours ago