ಮೈಸೂರು ನಗರ

ಕೆಡಿಪಿ: ಮಧ್ಯಾಹ್ನದಿಂದ ರಾತ್ರಿವರೆಗೂ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ತವರಿನಲ್ಲಿ ಶುಕ್ರವಾರ(ಸೆ.27) ಮಧ್ಯಾಹ್ನದಿಂದ ರಾತ್ರಿ 9:35ರವರೆಗೂ ಕೆಡಿಪಿ ಸಭೆ ನಡೆಸಿ, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.

ನಾನು ಮೈಸೂರಿಗೆ ಬಂದಾಗಲೆಲ್ಲಾ ಜನ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರ್ತಾರೆ. ಇದರ ಅರ್ಥ ಏನು? ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದ್ದರೆ ಆ ಜನ ನನ್ನ ಬಳಿಗೆ ನೂರಾರು ಸಂಖ್ಯೆಯಲ್ಲಿ ಏಕೆ ಬರುತ್ತಿದ್ದರು ಎಂದು ಸಿಎಂ ಖಾರವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಪ್ರಶ್ನಿಸಿದರು.

ಅಧಿಕಾರಿಗಳು ಸಮರ್ಪಕವಾಗಿ ಸಮಸ್ಯೆಗಳನ್ನು ಅಟೆಂಡ್ ಮಾಡಿದ್ದರೆ ಜನರೇಕೆ ನನ್ನ ಬಳಿಗೆ ಬರುತ್ತಿದ್ದರು ಎಂದು ಸಿಎಂ ಮರು ಪ್ರಶ್ನಿಸಿದರು.

ಅಧಿಕಾರಿಗಳು ಆಸ್ಪತ್ರೆ, ಹಾಸ್ಟೆಲ್, ಬಾರ್ ಗಳು ಇನ್ನಿತರೆ ಸ್ಥಳಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವುದನ್ನು ನಿಲ್ಲಿಸಿಬಿಟ್ಟಿದ್ದೀರಿ. ಹೀಗಾಗಿ ಭಯ ಇಲ್ಲವಾಗಿದೆ. ದಿಡೀರ್ ಭೇಟಿ ನೀಡಿ ಗುಣಮಟ್ಟವನ್ನು ಪರಿಶೀಲಿಸಬೇಕು, ನಿಯಮ ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂದು ಸೂಚಿಸಿದರು.

ನನ್ನ ಜಿಲ್ಲೆ ಮಾದರಿಯಾಗಿರಬೇಕು
ಮೈಸೂರು ನನ್ನ ಜಿಲ್ಲೆ. ಈ ಜಿಲ್ಲೆ ಮಾದರಿಯಾಗಿ ಇರಬೇಕು. ಉಳಿದ ಜಿಲ್ಲೆಗಳಿಗೆ ಮಾದರಿ ಆಗಬೇಕು. ಈ ಜವಾಬ್ದಾರಿನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ತೆಗೆದುಕೊಳ್ಳಬೇಕು. ತುಂಬ ವರ್ಷಗಳಿಂದ ಬಾಕಿ ಇರುವ ಫೈಲ್ಗಳನ್ನು ಪರಿಶೀಲಿಸಬೇಕು, ಏಕೆ ಕ್ಲಿಯರ್ ಮಾಡುತ್ತಿಲ್ಲ? ಐದು, ನಾಲ್ಕು, ಮೂರು ವರ್ಷಗಳಿಂದ ಫೈಲ್ಗಳು ಏಕೆ ಬಾಕಿ ಉಳಿದಿವೆ. ನೀವೇಕೆ ಇತ್ಯರ್ಥ ಮಾಡುತ್ತಿಲ್ಲ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.

ವಿಭಾಗೀಯ ಅಧಿಕಾರಿಗಳು ಚುರುಕಾಗಿದ್ದರೆ ಜಿಲ್ಲಾ ಮಟ್ಟದ ಅಧಿಕಾರಿಗಳೂ ಅಲರ್ಟ್ ಆಗಿರುತ್ತಾರೆ. ಕಚೇರಿ ಬಾಗಿಲಿಗೆ ರೈತರನ್ನು ಲಘುವಾಗಿ ನೋಡುವುದನ್ನು ನಾನು ಸಹಿಸಲ್ಲ. ಬಹಳ ಮಂದಿ ಅಧಿಕಾರಿಗಳು ಕಚೇರಿಯಲ್ಲೇ ಇರುವುದಿಲ್ಲ ಎನ್ನುವ ದೂರುಗಳು ಬರುತ್ತಿವೆ. ಪಿಡಿಒ ಗಳು ತಾಲ್ಲೂಕು ಕೇಂದ್ರದಲ್ಲೂ ಇರುವುದಿಲ್ಲ ಎನ್ನುವ ದೂರುಗಳು ನನಗೆ ಬರುತ್ತಿವೆ. ವೈದ್ಯರು ಕರ್ತವ್ಯದ ಸ್ಥಳದಲ್ಲಿ ನೆಲೆಸುತ್ತಿಲ್ಲ. ದೂರದ ಊರಿಂದ ಓಡಾಡುತ್ತಿದ್ದಾರೆ. ಇದನ್ನು ಸಹಿಸಬೇಕಾ ಎಂದು ಪ್ರಶ್ನಿಸಿದರು.

ನಿಮ್ಮ ಹೊಣೆಗಾರಿಕೆಗಳನ್ನು ನೀವು ಸೂಕ್ತವಾಗಿ ನಿರ್ವಹಿಸಿದರೆ, ಆ ಸಮಸ್ಯೆಗಳನ್ನು ಬಗೆಹರಿಸುವುದು ಕಷ್ಟವೇನಲ್ಲ. ಆದ್ದರಿಂದ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ. ಜನರ ಸಮಸ್ಯೆಗಳನ್ನು ಪರಿಹರಿಸಿ ಎಂದರು.

ನಿಮ್ಮ ಹಂತದಲ್ಲೇ ಬಗೆಹರಿಯುವ ಸಮಸ್ಯೆಗಳನ್ನು ಉದಾಸೀನ ಮಾಡದೆ ಬಗೆಹರಿಸಿ. ಜನ ನನ್ನ ಬಳಿಗೆ ಬರುತ್ತಿದ್ದಾರೆ ಎಂದರೆ ನಿಮ್ಮ ಹಂತದಲ್ಲಿ ಕೆಲಸಗಳು ಆಗುತ್ತಿಲ್ಲ ಅಂತಲೇ ಅರ್ಥ. ನೀವುಗಳು ಜನಗಳ ಪರವಾಗಿ ಇಲ್ಲ ಎನ್ನುವ ಅರ್ಥ ಬರುತ್ತದೆ. ನಿಮ್ಮ ನಿಮ್ಮ ಕೆಲಸವನ್ನು ಗಂಭೀರವಾಗಿ ಪರಿಗಣಿಸಿ ನಿರ್ವಹಿಸಿ ಎಂದು ತಾಕೀತು ಮಾಡಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

4 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

5 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

5 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

5 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

6 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

6 hours ago