ಮೈಸೂರು: ಕೆಳ ಹಂತದ ಅಧಿಕಾರಿಗಳು ಡೈರಿ ಬರೆಯುವುದನ್ನು, ಜಮೀನುಗಳಿಗೆ ಭೇಟಿ ನೀಡುವುದನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಖಚಿತಪಡಿಸಿಕೊಳ್ಳಿ. ಕೆಳ ಹಂತದ ಅಧಿಕಾರಿಗಳು ನೀಡುವ ವರದಿ ಆಧರಿಸಿ ಅಗತ್ಯ ಕಂಡ ಕೃಷಿ ಭೂಮಿಗೆ ಭೇಟಿ ನೀಡಿ ಪರಿಶೀಲಿಸಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.
ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆ ಇಲಾಖೆ ಅಧಿಕಾರಿಗಳು ಜನಸಂಪರ್ಕ ನಡೆಸುತ್ತಲೇ ಇರಬೇಕು. ನೀವು ಜನರ ಮಧ್ಯೆ ಇದ್ದು ಕೆಲಸ ಮಾಡಲೇಬೇಕು. ಆಗ ಮಾತ್ರ ಪರಿಣಾಮಕಾರಿ ಕೆಲಸ ಸಾಧ್ಯವಾಗುತ್ತದೆ. ನೀವು ಜನಸಂಪರ್ಕ ಸಭೆ ನಡೆಸದೆ ಕೇವಲ ಸಭೆಗಳಲ್ಲಿ ಬಂದು ನೀವು ಹೇಳಿದ್ದನ್ನು ಕೇಳಿಕೊಂಡು ನಾವು ಹೋಗುವುದಿಲ್ಲ ಎಂದು ಹೇಳಿದರು,
ಕೃಷಿ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ರೈತರ ಜಮೀನುಗಳಲ್ಲಿ ಪರಿಶೀಲನೆ ನಡೆಸಬೇಕು. ರೈತರ ಸಭೆಗಳನ್ನು ನಡೆಸಬೇಕು. ಇದನ್ನೆಲ್ಲಾ ನೀವು ಮಾಡಿದ್ದೀರಾ ಎಂದು ಸಿಎಂ ಪ್ರಶ್ನಿಸಿದರು. ಈ ವೇಳೆ ಕೃಷಿ ಅಧಿಕಾರಿ ತಾವು ಗ್ರಾಮ ಭೇಟಿ ನೀಡಿದ್ದ ಡೈರಿಯನ್ನು ಸಿಎಂಗೆ ನೀಡಿದರು. ಸಿಎಂ ಡೈರಿ ಪರಿಶೀಲಿಸಿದರು. ಸಮಾಧಾನ ಆಗಲಿಲ್ಲ. ನೀವು ಭೇಟಿ ನೀಡಿದ ಫೋಟೋಗಳನ್ನು ತೋರಿಸಿ ಎಂದರು. ಅಧಿಕಾರಿಗಳು ತಾವು ಭೇಟಿ ನೀಡಿದ್ದ ಫೋಟೋಗಳನ್ನು ಪ್ರದರ್ಶಿಸಿದರು.
ಆದರೂ ಸಮಾಧಾನ ಆಗದ ಮುಖ್ಯಮಂತ್ರಿಗಳು, ರೈತರ ಜಮೀನುಗಳಿಗೆ ಭೇಟಿ ನೀಡಿದಾಗ ರೈತರಿಗೆ ಹೆಚ್ಚು ತಿಳಿವಳಿಕೆ ಇದೆಯಾ? ನಿಮಗೆ ಹೆಚ್ಚು ತಿಳಿವಳಿಕೆ ಇದೆಯಾ ಗೊತ್ತಾಯ್ತಾ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು, ಪ್ರಾಕ್ಟಿಕಲ್ ಆಗಿ ರೈತರು ಬುದ್ದಿವಂತರಿರುತ್ತಾರೆ. ನಾವು ಅವರಿಂದ ಕಲಿಯುತ್ತೀವಿ ಎಂದರು.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…
ಕನ್ನಡದ ಖಾಸಗಿ ಚಾನೆಲ್ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…
ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…