ಮೈಸೂರು: ಕೆಳ ಹಂತದ ಅಧಿಕಾರಿಗಳು ಡೈರಿ ಬರೆಯುವುದನ್ನು, ಜಮೀನುಗಳಿಗೆ ಭೇಟಿ ನೀಡುವುದನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಖಚಿತಪಡಿಸಿಕೊಳ್ಳಿ. ಕೆಳ ಹಂತದ ಅಧಿಕಾರಿಗಳು ನೀಡುವ ವರದಿ ಆಧರಿಸಿ ಅಗತ್ಯ ಕಂಡ ಕೃಷಿ ಭೂಮಿಗೆ ಭೇಟಿ ನೀಡಿ ಪರಿಶೀಲಿಸಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.
ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆ ಇಲಾಖೆ ಅಧಿಕಾರಿಗಳು ಜನಸಂಪರ್ಕ ನಡೆಸುತ್ತಲೇ ಇರಬೇಕು. ನೀವು ಜನರ ಮಧ್ಯೆ ಇದ್ದು ಕೆಲಸ ಮಾಡಲೇಬೇಕು. ಆಗ ಮಾತ್ರ ಪರಿಣಾಮಕಾರಿ ಕೆಲಸ ಸಾಧ್ಯವಾಗುತ್ತದೆ. ನೀವು ಜನಸಂಪರ್ಕ ಸಭೆ ನಡೆಸದೆ ಕೇವಲ ಸಭೆಗಳಲ್ಲಿ ಬಂದು ನೀವು ಹೇಳಿದ್ದನ್ನು ಕೇಳಿಕೊಂಡು ನಾವು ಹೋಗುವುದಿಲ್ಲ ಎಂದು ಹೇಳಿದರು,
ಕೃಷಿ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ರೈತರ ಜಮೀನುಗಳಲ್ಲಿ ಪರಿಶೀಲನೆ ನಡೆಸಬೇಕು. ರೈತರ ಸಭೆಗಳನ್ನು ನಡೆಸಬೇಕು. ಇದನ್ನೆಲ್ಲಾ ನೀವು ಮಾಡಿದ್ದೀರಾ ಎಂದು ಸಿಎಂ ಪ್ರಶ್ನಿಸಿದರು. ಈ ವೇಳೆ ಕೃಷಿ ಅಧಿಕಾರಿ ತಾವು ಗ್ರಾಮ ಭೇಟಿ ನೀಡಿದ್ದ ಡೈರಿಯನ್ನು ಸಿಎಂಗೆ ನೀಡಿದರು. ಸಿಎಂ ಡೈರಿ ಪರಿಶೀಲಿಸಿದರು. ಸಮಾಧಾನ ಆಗಲಿಲ್ಲ. ನೀವು ಭೇಟಿ ನೀಡಿದ ಫೋಟೋಗಳನ್ನು ತೋರಿಸಿ ಎಂದರು. ಅಧಿಕಾರಿಗಳು ತಾವು ಭೇಟಿ ನೀಡಿದ್ದ ಫೋಟೋಗಳನ್ನು ಪ್ರದರ್ಶಿಸಿದರು.
ಆದರೂ ಸಮಾಧಾನ ಆಗದ ಮುಖ್ಯಮಂತ್ರಿಗಳು, ರೈತರ ಜಮೀನುಗಳಿಗೆ ಭೇಟಿ ನೀಡಿದಾಗ ರೈತರಿಗೆ ಹೆಚ್ಚು ತಿಳಿವಳಿಕೆ ಇದೆಯಾ? ನಿಮಗೆ ಹೆಚ್ಚು ತಿಳಿವಳಿಕೆ ಇದೆಯಾ ಗೊತ್ತಾಯ್ತಾ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು, ಪ್ರಾಕ್ಟಿಕಲ್ ಆಗಿ ರೈತರು ಬುದ್ದಿವಂತರಿರುತ್ತಾರೆ. ನಾವು ಅವರಿಂದ ಕಲಿಯುತ್ತೀವಿ ಎಂದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…