ಮೈಸೂರು ನಗರ

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಆಕಸ್ಮಿಕವಾದರೂ, ಅದು ಮಹಿಳೆಯೊಬ್ಬರ ಅಪ್ರತಿಮ ಧೈರ್ಯ ಮತ್ತು ಅತ್ತೆ-ಸೊಸೆಯ ಪವಿತ್ರ ಬಾಂಧವ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಸಚಿವರು ಬಣ್ಣಿಸಿದ್ದಾರೆ.

​ತಮ್ಮ ಮನೆಯ ಮಂಚದಡಿ ಚಿರತೆ ಅಡಗಿರುವುದು ತಿಳಿಯುತ್ತಿದ್ದಂತೆಯೇ, ಪ್ರಾಣದ ಹಂಗು ತೊರೆದು ಕೊಠಡಿಗೆ ನುಗ್ಗಿ, ವಯಸ್ಸಾದ ಅತ್ತೆಯನ್ನು ಅಪ್ಪಿಕೊಂಡು ಸುರಕ್ಷಿತವಾಗಿ ಹೊರಗೆ ಕರೆತಂದ ಸುಜಾತಾ ಅವರ ಸಾಹಸ ನಿಜಕ್ಕೂ ರೋಮಾಂಚನಕಾರಿ. ಸಾಕ್ಷಾತ್ ಮೃತ್ಯುವಿನ ದವಡೆಯಿಂದ ಅತ್ತೆಯನ್ನು ರಕ್ಷಿಸಿದ ಅವರ ಸಮಯಪ್ರಜ್ಞೆ ಇಡೀ ಮಹಿಳಾ ಕುಲಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದಿದ್ದಾರೆ.

ಅತ್ತೆ-ಸೊಸೆಯ ಸಂಬಂಧದ ಬಗ್ಗೆ ಸಮಾಜದಲ್ಲಿರುವ ಹಳೆಯ ಕಲ್ಪನೆಗಳನ್ನು ಅಳಿಸಿ, ಸುಜಾತಾ ಅವರು ಇಂದು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದಾರೆ.

​ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆಯಾಗಿ, ಸುಜಾತಾ ಅವರ ಈ ಅಸಾಧಾರಣ ಶೌರ್ಯವನ್ನು ನಾನು ಮನತುಂಬಿ ಶ್ಲಾಘಿಸುತ್ತೇನೆ. ಅವರ ಈ ಸಾಹಸವನ್ನು ಗೌರವಿಸಲು ಮುಂದಿನ ವರ್ಷದ “ಕಿತ್ತೂರು ರಾಣಿ ಚೆನ್ನಮ್ಮ ಸಾಹಸ ಪ್ರಶಸ್ತಿ” ಗೆ ಅವರ ಹೆಸರನ್ನು ಪರಿಗಣಿಸಲು ನಮ್ಮ ಇಲಾಖೆಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದರು.

​ಧೈರ್ಯವಂತ ಮಹಿಳೆಯರೇ ಈ ನಾಡಿನ ನಿಜವಾದ ಶಕ್ತಿ. ಸುಜಾತಾ ಅವರ ಈ ಶೌರ್ಯದ ಗಾಥೆ ಮನೆಮನಗಳಿಗೆ ತಲುಪಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

46 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

48 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

49 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

51 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

56 mins ago