ಮೈಸೂರು ನಗರ

ಚೆನ್ನಮ್ಮನ ಸಾಹಸ ಅಮರ, ಅವರ ತ್ಯಾಗ ಬಲಿದಾನಕ್ಕೆ ಸ್ವಾತಂತ್ರ್ಯ: ಎಲ್‌. ನಾಗೇಂದ್ರ

ಮೈಸೂರು: ‘ದೇಶದ ಸ್ವಾತಂತ್ರ್ಯಕ್ಕಾಗಿ ಚನ್ನಮ್ಮ ಮಾಡಿದ ಹೋರಾಟ ಎಂದಿಗೂ ಮರೆಯಲು ಸಾಧ್ಯವಿಲ್ಲ. ಸಾವಿರಾರು ವೀರಯೋಧರೊಂದಿಗೆ ಬ್ರಿಟಿಷರನ್ನು ಹಿಮ್ಮೆಟ್ಟಿಸಿದ ಚನ್ನಮ್ಮನ ಸಾಹಸ ಎಂದೆಂದಿಗೂ ಅಮರ ಎಂದು ಬಿಜೆಪಿ ನಗರಾಧ್ಯಕ್ಷ ಎಲ್‌.ನಾಗೇಂದ್ರ ತಿಳಿಸಿದರು.

ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಇಂದು ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ, ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಮಾತನಾಡಿದರು.

ದೇಶದ ಪ್ರತಿಯೊಬ್ಬರು ಚನ್ನಮ್ಮನನ್ನು ಸ್ಮರಣೆ ಮಾಡಬೇಕು. ಹಿರಿಯ ಹೋರಾಟಗಾರರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅಲ್ಲದೇ, ಚೆನ್ನಮ್ಮನ ಸಾಹಸ ಅಮರವಾಗಿದೆ. ಹೀಗಾಗಿ ಸಮಾಜಕ್ಕೆ ಕೊಡುಗೆ ನೀಡಿದ ಮಹನೀಯರನ್ನು ಸ್ಮರಿಸಬೇಕು. ಮಕ್ಕಳಲ್ಲಿ ಚೆನ್ನಮ್ಮನ ಆದರ್ಶಗಳನ್ನು ಬೆಳೆಸಲು ಪಾಲಕರು ಮುಂದಾಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ, ಮಾಜಿ ನಗರ ಪಾಲಿಕಾ ಸದಸ್ಯೆ ಪ್ರಮೀಳಾ ಭರತ್, ಜಗದೀಶ್, ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ಅಧ್ಯಕ್ಷೆ ನಾಗಶ್ರೀ ಸುಚಿಂದ್ರ, ಅಪೂರ್ವ ಸುರೇಶ್, ಅಂಬಾಭವಾನಿ ಸಮಾಜ ಮಹಿಳಾ ಅಧ್ಯಕ್ಷೆ ಸವಿತಾ ಘಾಟ್ಕೆ, ಸಮಾಜ ಸೇವಕರಾದ ವಿದ್ಯಾ, ಮಂಜುನಾಥ್, ವಿಘ್ನೇಶ್ವರ ಭಟ್, ಸುದರ್ಶನ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

 

ಆಂದೋಲನ ಡೆಸ್ಕ್

Recent Posts

ಟಿ.ನರಸೀಪುರ| ಯುಗಾದಿ ಸಂಭ್ರಮ: ತ್ರಿವೇಣಿ ಸಂಗಮಕ್ಕೆ ಹರಿದುಬಂದ ಭಕ್ತಸಾಗರ

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…

6 mins ago

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಒದ್ದಾಡಿದ ಕಾಡಾನೆ

ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…

18 mins ago

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

37 mins ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

53 mins ago

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…

1 hour ago

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…

1 hour ago