ಮೈಸೂರು: ‘ದೇಶದ ಸ್ವಾತಂತ್ರ್ಯಕ್ಕಾಗಿ ಚನ್ನಮ್ಮ ಮಾಡಿದ ಹೋರಾಟ ಎಂದಿಗೂ ಮರೆಯಲು ಸಾಧ್ಯವಿಲ್ಲ. ಸಾವಿರಾರು ವೀರಯೋಧರೊಂದಿಗೆ ಬ್ರಿಟಿಷರನ್ನು ಹಿಮ್ಮೆಟ್ಟಿಸಿದ ಚನ್ನಮ್ಮನ ಸಾಹಸ ಎಂದೆಂದಿಗೂ ಅಮರ ಎಂದು ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ತಿಳಿಸಿದರು.
ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಇಂದು ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ, ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಮಾತನಾಡಿದರು.
ದೇಶದ ಪ್ರತಿಯೊಬ್ಬರು ಚನ್ನಮ್ಮನನ್ನು ಸ್ಮರಣೆ ಮಾಡಬೇಕು. ಹಿರಿಯ ಹೋರಾಟಗಾರರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅಲ್ಲದೇ, ಚೆನ್ನಮ್ಮನ ಸಾಹಸ ಅಮರವಾಗಿದೆ. ಹೀಗಾಗಿ ಸಮಾಜಕ್ಕೆ ಕೊಡುಗೆ ನೀಡಿದ ಮಹನೀಯರನ್ನು ಸ್ಮರಿಸಬೇಕು. ಮಕ್ಕಳಲ್ಲಿ ಚೆನ್ನಮ್ಮನ ಆದರ್ಶಗಳನ್ನು ಬೆಳೆಸಲು ಪಾಲಕರು ಮುಂದಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ, ಮಾಜಿ ನಗರ ಪಾಲಿಕಾ ಸದಸ್ಯೆ ಪ್ರಮೀಳಾ ಭರತ್, ಜಗದೀಶ್, ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ಅಧ್ಯಕ್ಷೆ ನಾಗಶ್ರೀ ಸುಚಿಂದ್ರ, ಅಪೂರ್ವ ಸುರೇಶ್, ಅಂಬಾಭವಾನಿ ಸಮಾಜ ಮಹಿಳಾ ಅಧ್ಯಕ್ಷೆ ಸವಿತಾ ಘಾಟ್ಕೆ, ಸಮಾಜ ಸೇವಕರಾದ ವಿದ್ಯಾ, ಮಂಜುನಾಥ್, ವಿಘ್ನೇಶ್ವರ ಭಟ್, ಸುದರ್ಶನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…