ಮೈಸೂರು ನಗರ

ಚುನಾವಣಾ ರಾಜಕೀಯಕ್ಕೆ ಕೆ.ಎನ್.ರಾಜಣ್ಣ ನಿವೃತ್ತಿ ಘೋಷಣೆ

ಮೈಸೂರು: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಈಗ 75 ವರ್ಷ ಆಗಿದೆ. ಆದ್ದರಿಂದ ನಾನು ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ. ಯುವಕರಿಗೆ ಅವಕಾಶ ಕಲ್ಪಿಸಿಕೊಡಬೇಕು. ಮುಂದಿನ ಚುನಾವಣೆಗೆ 78 ವರ್ಷ ಆಗಲಿದೆ. 78 ವಯಸ್ಸಿನ ನಂತರ ಮುಂದೆ ಗೆದ್ದು ಏನು ಕೆಲಸ ಮಾಡಲು ಸಾಧ್ಯ? ಎಂದು ಪ್ರಶ್ನೆ ಮಾಡಿದರು.

ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗಲ್ಲ. ಆದ್ದರಿಂದ ಯುವಕರಿಗೆ ಹೆಚ್ಚು ಅವಕಾಶ ನೀಡಬೇಕು. ರಾಜಕೀಯದಿಂದ ನಿವೃತ್ತಿಯಾದರೂ ಸಕ್ರಿಯ ರಾಜಕಾರಣದಲ್ಲಿ ಹಾಗೂ ಸಹಕಾರಿ ಆಂದೋಲನದಲ್ಲಿ ಇರಲಿದ್ದೇನೆ. ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ ಅಷ್ಟೇ. ಪರಿಸ್ಥಿತಿ ಕೆಟ್ಟಿದೆ ಎಂದು ಹೇಳಲು ಆಗೋದಿಲ್ಲ. ಯುವಕರಿಗೆ ಮಾರ್ಗದರ್ಶನ ನೀಡಿ ಅವರಿಗೆ ಅವಕಾಶ ಕಲ್ಪಿಸಬೇಕಿದೆ. ಆದ್ದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಮೈಸೂರು ಅಂದ್ರೆ ನನಗೆ ಬಹಳ ಇಷ್ಟ. ಮೈಸೂರು ವಿವಿಯಲ್ಲೇ ನಾನು ವ್ಯಾಸಂಗ ಮಾಡಿದ್ದೇನೆ. ಮೈಸೂರು ವಾತಾವರಣ ಅಹ್ಲಾದಕರವಾಗಿದೆ, ಈ ಬಗ್ಗೆ ಯಾರು ಹೇಳಬೇಕಿಲ್ಲ. ಉತ್ತಮ ವಾತಾವರಣದ ಮೂಲಕ ಸಾಂಸ್ಕೃತಿಕ ನಗರಿ ಮೈಸೂರು ಗೌರವ ಹಾಗೂ ಇತಿಹಾಸ ಹೊಂದಿದೆ ಎಂದು ಮೈಸೂರನ್ನು ಹಾಡಿ ಹೊಗಳಿದರು.

ಆಂದೋಲನ ಡೆಸ್ಕ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

2 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

3 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

4 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

5 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

5 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

7 hours ago