KN Rajanna
ಮೈಸೂರು: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಈಗ 75 ವರ್ಷ ಆಗಿದೆ. ಆದ್ದರಿಂದ ನಾನು ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ. ಯುವಕರಿಗೆ ಅವಕಾಶ ಕಲ್ಪಿಸಿಕೊಡಬೇಕು. ಮುಂದಿನ ಚುನಾವಣೆಗೆ 78 ವರ್ಷ ಆಗಲಿದೆ. 78 ವಯಸ್ಸಿನ ನಂತರ ಮುಂದೆ ಗೆದ್ದು ಏನು ಕೆಲಸ ಮಾಡಲು ಸಾಧ್ಯ? ಎಂದು ಪ್ರಶ್ನೆ ಮಾಡಿದರು.
ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗಲ್ಲ. ಆದ್ದರಿಂದ ಯುವಕರಿಗೆ ಹೆಚ್ಚು ಅವಕಾಶ ನೀಡಬೇಕು. ರಾಜಕೀಯದಿಂದ ನಿವೃತ್ತಿಯಾದರೂ ಸಕ್ರಿಯ ರಾಜಕಾರಣದಲ್ಲಿ ಹಾಗೂ ಸಹಕಾರಿ ಆಂದೋಲನದಲ್ಲಿ ಇರಲಿದ್ದೇನೆ. ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ ಅಷ್ಟೇ. ಪರಿಸ್ಥಿತಿ ಕೆಟ್ಟಿದೆ ಎಂದು ಹೇಳಲು ಆಗೋದಿಲ್ಲ. ಯುವಕರಿಗೆ ಮಾರ್ಗದರ್ಶನ ನೀಡಿ ಅವರಿಗೆ ಅವಕಾಶ ಕಲ್ಪಿಸಬೇಕಿದೆ. ಆದ್ದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮೈಸೂರು ಅಂದ್ರೆ ನನಗೆ ಬಹಳ ಇಷ್ಟ. ಮೈಸೂರು ವಿವಿಯಲ್ಲೇ ನಾನು ವ್ಯಾಸಂಗ ಮಾಡಿದ್ದೇನೆ. ಮೈಸೂರು ವಾತಾವರಣ ಅಹ್ಲಾದಕರವಾಗಿದೆ, ಈ ಬಗ್ಗೆ ಯಾರು ಹೇಳಬೇಕಿಲ್ಲ. ಉತ್ತಮ ವಾತಾವರಣದ ಮೂಲಕ ಸಾಂಸ್ಕೃತಿಕ ನಗರಿ ಮೈಸೂರು ಗೌರವ ಹಾಗೂ ಇತಿಹಾಸ ಹೊಂದಿದೆ ಎಂದು ಮೈಸೂರನ್ನು ಹಾಡಿ ಹೊಗಳಿದರು.
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…