ಮೈಸೂರು ನಗರ

ಚುನಾವಣಾ ರಾಜಕೀಯಕ್ಕೆ ಕೆ.ಎನ್.ರಾಜಣ್ಣ ನಿವೃತ್ತಿ ಘೋಷಣೆ

ಮೈಸೂರು: ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಈಗ 75 ವರ್ಷ ಆಗಿದೆ. ಆದ್ದರಿಂದ ನಾನು ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ. ಯುವಕರಿಗೆ ಅವಕಾಶ ಕಲ್ಪಿಸಿಕೊಡಬೇಕು. ಮುಂದಿನ ಚುನಾವಣೆಗೆ 78 ವರ್ಷ ಆಗಲಿದೆ. 78 ವಯಸ್ಸಿನ ನಂತರ ಮುಂದೆ ಗೆದ್ದು ಏನು ಕೆಲಸ ಮಾಡಲು ಸಾಧ್ಯ? ಎಂದು ಪ್ರಶ್ನೆ ಮಾಡಿದರು.

ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗಲ್ಲ. ಆದ್ದರಿಂದ ಯುವಕರಿಗೆ ಹೆಚ್ಚು ಅವಕಾಶ ನೀಡಬೇಕು. ರಾಜಕೀಯದಿಂದ ನಿವೃತ್ತಿಯಾದರೂ ಸಕ್ರಿಯ ರಾಜಕಾರಣದಲ್ಲಿ ಹಾಗೂ ಸಹಕಾರಿ ಆಂದೋಲನದಲ್ಲಿ ಇರಲಿದ್ದೇನೆ. ಚುನಾವಣಾ ರಾಜಕೀಯದಿಂದ ದೂರ ಉಳಿಯುತ್ತೇನೆ ಅಷ್ಟೇ. ಪರಿಸ್ಥಿತಿ ಕೆಟ್ಟಿದೆ ಎಂದು ಹೇಳಲು ಆಗೋದಿಲ್ಲ. ಯುವಕರಿಗೆ ಮಾರ್ಗದರ್ಶನ ನೀಡಿ ಅವರಿಗೆ ಅವಕಾಶ ಕಲ್ಪಿಸಬೇಕಿದೆ. ಆದ್ದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಮೈಸೂರು ಅಂದ್ರೆ ನನಗೆ ಬಹಳ ಇಷ್ಟ. ಮೈಸೂರು ವಿವಿಯಲ್ಲೇ ನಾನು ವ್ಯಾಸಂಗ ಮಾಡಿದ್ದೇನೆ. ಮೈಸೂರು ವಾತಾವರಣ ಅಹ್ಲಾದಕರವಾಗಿದೆ, ಈ ಬಗ್ಗೆ ಯಾರು ಹೇಳಬೇಕಿಲ್ಲ. ಉತ್ತಮ ವಾತಾವರಣದ ಮೂಲಕ ಸಾಂಸ್ಕೃತಿಕ ನಗರಿ ಮೈಸೂರು ಗೌರವ ಹಾಗೂ ಇತಿಹಾಸ ಹೊಂದಿದೆ ಎಂದು ಮೈಸೂರನ್ನು ಹಾಡಿ ಹೊಗಳಿದರು.

ಆಂದೋಲನ ಡೆಸ್ಕ್

Recent Posts

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

5 hours ago

ಕೊಡಗಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ

ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್‌ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…

5 hours ago

ತಮಿಳುನಾಡಿಗೆ ನೀರು; 72 ಅಡಿಗೆ ಕುಸಿದ ಕಬಿನಿ ಜಲಾಶಯ

ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ  ಎಚ್.ಡಿ.ಕೋಟೆ: ಈ ಬಾರಿ…

5 hours ago

ಮೇವಿನ ಕೊರತೆ; ಹಸಿರು ಮೇವು ಖರೀದಿಗೆ ಮುಂದಾದ ರೈತರು

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…

5 hours ago

ಗಜಪಯಣಕ್ಕೆ ನಡೆದಿದೆ ಭರದ ಸಿದ್ಧತೆ

ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು  ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…

5 hours ago