ಮೈಸೂರು ನಗರ

ನಮ್ಮ ಸರ್ಕಾರ ಹೇಳಿದಂತೆ ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ನೀಡುತ್ತೇವೆ: ಸಚಿವ ಕೆ.ಎನ್.ರಾಜಣ್ಣ

ಮೈಸೂರು: ನಮ್ಮ ಸರ್ಕಾರ ಹೇಳಿದಂತೆ ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ನೀಡುತ್ತೇವೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ.

ಗೃಹಲಕ್ಷ್ಮೀ ಹಣದ ಬಗ್ಗೆ‌ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಹೇಳಿಕೆ ತಿರುಚಲಾಗಿದೆ ಎಂದರು. ಇದಕ್ಕೆ ಮಾಧ್ಯಮ‌ ಪ್ರತಿನಿಧಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತಕ್ಷಣ ವರಸೆ ಬದಲಿಸಿದ ರಾಜಣ್ಣ ಅವರು, ಡಿ.ಕೆ.ಶಿವಕುಮಾರ್ ಆ ರೀತಿ ಹೇಳಿರುವ ಬಗ್ಗೆ ನನಗೆ ಅನುಮಾನವಿದೆ. ನನಗೆ ಆ ರೀತಿ ಅವರು ಹೇಳಿದ್ದಾರೆ ಅನ್ನಿಸುವುದಿಲ್ಲ. ನಮ್ಮ ಸರ್ಕಾರ ಹೇಳಿದಂತೆ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ನೀಡುತ್ತೇವೆ. ಕೆಲ ತಾಂತ್ರಿಕ ಕಾರಣಗಳಿಂದ ಕೆಲ ತಿಂಗಳ ಹಣ ಬಂದಿಲ್ಲ ಅಷ್ಟೇ. ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ನೀಡಲು ನಾವು ಬದ್ಧ ಎಂದು ಸ್ಪಷ್ಟನೆ ನೀಡಿದರು.

ಇನ್ನು ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮಳೆ ಅವಾಂತರ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೆರೆ, ಕಾಲುವೆ, ಚರಂಡಿ ಒತ್ತುವರಿಯಿಂದ ಈ ಪರಿಸ್ಥಿತಿ ಬಂದಿದೆ. ನೀರು ಹೇಗೆ ಹರಿಯಬೇಕು ಎಂದು ನಾವು ಹೇಳಲು ಸಾಧ್ಯವಿಲ್ಲ. ಆದರೆ ಅದಕ್ಕೆ ಅದರ ದಾರಿ ಗೊತ್ತಿದೆ. ಮೋರಿ, ಚರಂಡಿ, ಕಾಲುವೆ ಮುಚ್ಚಿದ ಪರಿಣಾಮ ಈ ರೀತಿ ಅಗಿದೆ. ಸಾಧನಾ ಸಮಾವೇಶ ಮುಗಿದ ನಂತರ ಎಲ್ಲರಿಂದಲೂ ಪರಿಶೀಲನೆ ನಡೆಯಲಿದ್ದು, ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲಾಗುತ್ತದೆ. ರಾಜಕಾಲುವೆ ಒತ್ತುವರಿಯನ್ನು ನಿರಂತರವಾಗಿ ಮಾಡಲಾಗುವುದು. ಹಿಂದಿನ ಸರ್ಕಾರ ಅರ್ಧಂಬರ್ಧ ಮಾಡಿದೆ. ನಾವು ಮಳೆ ಬಂದಾಗ ಮಾತ್ರವಲ್ಲ ಎಲ್ಲಾ ಸಮಯದಲ್ಲೂ ಒತ್ತುವರಿ ತೆರವು ಕಾರ್ಯ ನಡೆಸುತ್ತಿದ್ದೇವೆ. ಡಿಸಿಎಂ ಡಿ.ಕೆ.ಶಿವಕುಮಾರ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

6 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

31 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

58 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

1 hour ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago