ಸಂತ ಫ್ರಾನ್ಸಿಸ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಕೆ.ದೀಪಕ್ ಕರೆ
ಮೈಸೂರು : ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದ ಜ್ಞಾನದ ಜತೆಗೆ ದೇಶದ ಇತಿಹಾಸ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮಹತ್ವವನ್ನೂ ತಿಳಿದುಕೊಳ್ಳಬೇಕು ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ತಿಳಿಸಿದರು.
ನಗರದ ಹೊರವಲಯದ ಜೆಟ್ಟಿಹುಂಡಿ- ಬೀರಿಹುಂಡಿಯಲ್ಲಿರುವ ಸಂತ ಫ್ರಾನ್ಸಿಸ್ ಶಾಲೆಯಲ್ಲಿ ಇಂದು ಆಯೋಜಿಸಿದ್ದ ಕಲಾ ಮತ್ತು ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶಾಲಾ ಪಠ್ಯಕ್ರಮದ ಜೊತೆಗೆ ಇಂದಿನ ಸ್ಪರ್ಧಾತ್ಮಕ ಮತ್ತು ಡಿಜಿಟಲ್ ಯುಗಕ್ಕೆ ಅಣಿಯಾಗಬೇಕಿದ್ದು, ಕೌಶಲ್ಯ ವೃದ್ಧಿಗೆ ಆದ್ಯತೆ ನೀಡಬೇಕು. ಸಮೂಹ ಕಲೆ, ಸಮಯ ನಿರ್ವಹಣೆ, ಭಿನ್ನ ಆಲೋಚನೆ, ನಾಯಕತ್ವ ಗುಣ ಮತ್ತು ಡಿಜಿಟಲ್ ಜ್ಞಾನವನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಕೇವಲ ಶಿಕ್ಷಣ, ತಂತ್ರಜ್ಞಾನ, ಕೌಶಲ್ಯ ವೃದ್ಧಿಗೆ ಸೀಮಿತರಾಗದೆ. ಈ ದೇಶದ ಸ್ವಾತಂತ್ರ್ಯದ ಮಹತ್ವ, ಪ್ರಜಾಪ್ರಭುತ್ವದ ಮಹತ್ವ , ಮಾನವೀನ ಮೌಲ್ಯ ಮತ್ತು ಸಂವಿಧಾನದ ಅರಿವು ಬಹಳ ಮುಖ್ಯ. ಆಗ ಮಾತ್ರ ನಾವು ಪರಿಪೂರ್ಣ ನಾಗರಿಕರಾಗಲು ಸಾಧ್ಯ ಎಂದು ಹೇಳಿದರು.
ನಂತರ ವಿಜ್ಞಾನ, ಗಣಿತ, ಹಿಂದಿ, ಇಂಗ್ಲಿಷ್, ಕನ್ನಡ, ಕ್ರೀಡಾ ವಿಭಾಗಗಳಲ್ಲಿ ದೇಶದ ಇತಿಹಾಸ, ಪರಂಪರೆ, ವಿಜ್ಞಾನದ ಮಾದರಿಗಳು, ಕ್ರೀಡಾ ಸಾಧಕರ ಮಾದರಿಗಳ ಅನಾವರಣಗೊಳಿಸಲಾಗೊತ್ತು.
ಶಾಲೆಯ ನಿರ್ದೇಶಕ ವಿಜಯ್ ಕುಮಾರ್ ಪೆರೆರ, ಬ್ರದರ್ ಬ್ರಿಟೊ, ಬ್ರದರ್ ಅಬಿನಾಶ್, ಪ್ರಾಂಶುಪಾಲರಾದ ಸಿಸ್ಟರ್ ಅಂಜುಮಾನ್ ಕುರಿಯನ್, ಉಪ ಪ್ರಾಂಶುಪಾಲರಾದ ರೇಣು ಶ್ರೀನಿವಾಸ್ ಹಾಜರಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…